ಮರಕ್ಕೆ ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Public TV
1 Min Read

ಮಂಗಳೂರು: ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ತೆಕ್ಕಾರು ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಮರಮೆ ಎಂಬಲ್ಲಿನ ನಿವಾಸಿ ಪ್ರಥಮ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದಾನೆ.

ಗುರುವಾರ ರಾತ್ರಿ ಮನೆಯಲ್ಲಿದ್ದ ಪ್ರಥಮ್ ಬೆಳಗ್ಗೆ ಮನೆಯ ಬಳಿಯ ಮಾವಿನಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕಾಲೇಜಿನಲ್ಲೂ ಒಳ್ಳೆಯ ವಿದ್ಯಾರ್ಥಿಯಾಗಿದ್ದು ಕಲಿಕೆಯಲ್ಲೂ ಮುಂದಿದ್ದ. ಆದರೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಅನ್ನೋದು ತಿಳಿದುಬಂದಿಲ್ಲ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *