ಮಂಗಳೂರು ಬಾಂಬ್ ಬ್ಲಾಸ್ಟ್‌ಗೆ ನಿಷೇಧಿತ PFI ಲಿಂಕ್ – ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳಲು ಸ್ಕೆಚ್

Public TV
1 Min Read

ಮಂಗಳೂರು: ನಗರದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Bomb Blast) ಪ್ರಕರಣದ ಶಂಕಿತ ಆರೋಪಿ ಶಾರೀಕ್ ಗುರುತು ಪತ್ತೆ ಹಚ್ಚಲು ತಡರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ (Mangaluru) ಆತನ ಪೋಷಕರನ್ನು ಪೊಲೀಸರು ಕರೆತಂದಿದ್ದಾರೆ. ತನಿಖೆ ತೀವ್ರಗೊಂಡಿದ್ದು, ಹಲವು ಸ್ಫೋಟಕ ಮಾಹಿತಿಗಳು ಹೊರಬರುತ್ತಿವೆ.

ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Blast) ಮಾಡಿದವರು ಯಾರು, ಏಕೆ? ಮಂಗಳೂರು ಟಾರ್ಗೆಟ್‌ಗೆ ಕಾರಣವೇನು? ಪೊಲೀಸ್ (Police) ವಶದಲ್ಲಿ ಇರೋ ಶಂಕಿತರ ಬಾಯ್ಬಿಟ್ಟ ಸತ್ಯವೇನು? ಮಂಗಳೂರಿನಲ್ಲಿ ಭಯ ಹುಟ್ಟಿಸಬೇಕು ಅನ್ನೋ ಮುಖ್ಯ ಅಜೆಂಡಾವಾಗಿತ್ತಾ? ಅನ್ನೋ ಹಲವು ಪ್ರಶ್ನೆಗಳಿಗೆ ಈಗ ಉತ್ತರ ಸಿಕ್ಕಿದೆ. ಇದನ್ನೂ ಓದಿ: ಮದುವೆಯಾದ್ಮೇಲೂ ಅಕ್ರಮ ಸಂಬಂಧ – ಮಾಜಿ ಪ್ರೇಯಸಿಯನ್ನ ಕತ್ತರಿಸಿ, ಅರೆಬೆತ್ತಲಾಗಿ ಬಿಸಾಡಿ ವಿಕೃತಿ

ನಿಷೇಧಿತ ಪಿಎಫ್‌ಐ ಸಂಘಟನೆ ಈ ಬ್ಲಾಸ್ಟ್‌ ರೂವಾರಿಗಳಾಗಿದ್ದು, ಬ್ಲಾಸ್ಟ್ ಮೂಲಕ ಜನರಿಗೆ ಭಯ ಹುಟ್ಟಿಸಬೇಕು ಅನ್ನೋ ಸಂಚು ರೋಪಿಸಿತ್ತು ಎನ್ನಲಾಗಿದೆ. ಇದನ್ನೂ ಓದಿ: ಶಾರೀಕ್ ಗುರುತು ಪತ್ತೆ ಹಚ್ಚಲು ಮಂಗಳೂರಿಗೆ ಆಗಮಿಸಿದ ಹೆತ್ತವರು

ನಮ್ಮ ಸಹವಾಸಕ್ಕೆ ಯಾರೂ ಬರಬಾರದು ಅನ್ನೋದು ಮುಖ್ಯ ಅಜೆಂಡಾವಾಗಿತ್ತು. ಪಿಎಫ್‌ಐ ಬ್ಯಾನ್ ಮಾಡಿದ ಕೋಪವೂ ಇತ್ತು ಶಂಕಿತರಿಗೆ ಇತ್ತು. ಇದಕ್ಕೆ ಸೇಡು ತೀರಿಸಿಕೊಳ್ಳುವ ಹುನ್ನಾರ ಇತ್ತೆಂದು ಹೇಳಲಾಗುತ್ತಿದೆ. ಇದಕ್ಕೆ ಮೂಲ ಕಾರಣಗಳನ್ನು ಪತ್ತಹೆಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *