#KumaraswamynotmyCm- ಎಚ್ ಡಿಕೆ ವಿರುದ್ಧ ಕರಾವಳಿಯ ಜನರಿಂದ ಆನ್‍ಲೈನ್ ಹೋರಾಟ

Public TV
1 Min Read

ಮಂಗಳೂರು: ಕುಮಾರಸ್ವಾಮಿ ನಾಟ್ ಮೈ ಸಿಎಂ. ಇದು ಬಜೆಟ್ ನಲ್ಲಿ ಕಿಂಚಿತ್ತೂ ಅನುದಾನ ನೀಡದ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಕರಾವಳಿಯ ಜನ ಸಾಮಾಜಿಕ ಜಾಲತಾಣದಲ್ಲಿ ಹೋರಾಟ ಮಾಡುತ್ತಿದ್ದಾರೆ.

ಕುಮಾರಸ್ವಾಮಿ ನಾಟ್ ಮೈ ಸಿಎಂ ಎಂಬ ಫೇಸ್‍ಬುಕ್ ಪೇಜ್ ನಲ್ಲಿ ಸಿಎಂ ವಿರುದ್ಧ ಕರಾವಳಿಯ ಜನ ಅಭಿಯಾನ ಆರಂಭಿಸಿದ್ದು, ಅನುದಾನ ನೀಡದ ಕುಮಾರಸ್ವಾಮಿ ನಮ್ಮ ಮುಖ್ಯಮಂತ್ರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೀನುಗಾರರಿಗೆ ದ್ರೋಹ ಮಾಡಿದ ಕುಮಾರಸ್ವಾಮಿ ಗೆ ಧಿಕ್ಕಾರ, ಕರಾವಳಿ ವಿರೋಧಿ ಸರ್ಕಾರಕ್ಕೆ ಧಿಕ್ಕಾರ, ಕಡಲ ಮಕ್ಕಳ ಒಡಲು ಬಗೆದ ದುಷ್ಟ ಸರ್ಕಾರ ಎಂಬಿತ್ಯಾದಿ ಪ್ಲೇ ಕಾರ್ಡ್‍ಗಳನ್ನು ಹಾಕಿ ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಎಂ ಕುಮಾರಸ್ವಾಮಿ ನಡೆಯ ವಿರುದ್ಧ ಪ್ರತಿಭಟನೆ ನಡೆದಿದ್ದು, ಈಗ ಫೇಸ್ ಬುಕ್ ಮುಖಾಂತರವಾಗಿ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *