ಮಂಗನಕಾಯಿಲೆಗೆ 9 ಮಂದಿ ಸಾವು- ಶೀಘ್ರ ಪರಿಹಾರಕ್ಕಾಗಿ ಮಂಕಾಳು ವೈದ್ಯ ತಾಕೀತು

By
1 Min Read

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ (Kyasanur Forest Disease (KFD) 9 ಜನ ಸಾವನ್ನಪ್ಪಿದ್ದು, ಶೀಘ್ರವೇ ಪರಿಹಾರ ನೀಡುವಂತೆ ಸರ್ಕಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ (Mankala Vaidya) ಆಗ್ರಹಿಸಿದ್ದಾರೆ.

- Advertisement -

ಇಂದು ಕಾರವಾರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಜಿಲ್ಲಾ ಉಸ್ತುವಾರಿ ಸಚಿವರು ಮಂಗನಕಾಯಿಲೆಯಿಂದ ಮೃತರಾದವರಿಗೆ ಅರಣ್ಯ ಇಲಾಖೆ ಪರಿಹಾರ ನೀಡಬೇಕು ಎಂದು ಸೂಚಿಸಿದರು.

- Advertisement -

- Advertisement -

ಒಟ್ಟು 112 ಜನ ಅನಾರೋಗ್ಯಕ್ಕೊಳಗಾಗಿದ್ದರು. ಈ ಹಿಂದೆ ಸಾವು ಕಂಡವರಿಗೆ ಸರ್ಕಾರ ಪರಿಹಾರ ನೀಡಿತ್ತು. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾವಾದವರಿಗೆ ಯಾವುದೇ ಪರಿಹಾರ ನೀಡಿರಲಿಲ್ಲ. ಈ ಬಾರಿ ಕೂಡ 9 ಮಂದಿ ಬಲಿಯಾಗಿದ್ದಾರೆ. ಹೀಗಿದ್ದರೂ ಪರಿಹಾರ ಮಾತ್ರ ಮರೀಚಿಕೆಯಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ತೆಪ್ಪ ಮುಳುಗಿ ಮೂವರು ಪ್ರವಾಸಿಗರು ದುರ್ಮರಣ

- Advertisement -

Share This Article