ಗ್ರಾಮಲೆಕ್ಕಾಧಿಕಾರಿಯ ಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಗುರುವಾರ ಮಾನ್ವಿ ಬಂದ್!

Public TV
1 Min Read

ರಾಯಚೂರು: ಗ್ರಾಮಲೆಕ್ಕಾಧಿಕಾರಿಯ ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಒತ್ತಾಯಿಸಿ ಇದೇ ಗುರುವಾರ ವಿವಿಧ ಸಂಘಟನೆಗಳು ಮಾನ್ವಿ ಪಟ್ಟಣ ಬಂದ್‍ಗೆ ಕರೆ ನೀಡಿವೆ.

ಗ್ರಾಮಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಹತ್ಯೆಯ ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸುವಂತೆ ವಿವಿಧ ಸಂಘಟನೆಗಳು ಆಗ್ರಹಿಸಿದೆ. ಈ ಸಂಬಂಧ ಡಿಸೆಂಬರ್ 27ರ ಗುರುವಾರ ಮಾನ್ವಿ ಬಂದ್‍ಗೂ ಸಹ ಕರೆ ನೀಡಲಾಗಿದೆ.

ಮೃತನ ಕುಟುಂಬಸ್ಥರಿಗೆ 50 ಲಕ್ಷ ರೂಪಾಯಿ ಪರಿಹಾರ ಹಾಗೂ ದಂಧೆಕೋರರು ಪ್ರಭಾವಿಗಳಾಗಿದ್ದು, ಅವರ ಬಂಧನಕ್ಕೆ ಆಗ್ರಹಿಸಿ ಬಂದ್ ನಡೆಸುತ್ತಿರುವುದಾಗಿ ಸಂಘಟನೆಗಳು ತಿಳಿಸಿವೆ. ಇದನ್ನೂ ಓದಿ: ಗ್ರಾಮಲೆಕ್ಕಾಧಿಕಾರಿ ಹತ್ಯೆ ಪ್ರಕರಣ: ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆಂದ ಲಿಂಗಸುಗೂರು ಶಾಸಕ

ಏನಿದು ಪ್ರಕರಣ?
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಚೀಕಪರ್ವಿಯಲ್ಲಿ ಸಾಹೇಬ್ ಪಟೇಲ್ ಗ್ರಾಮಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶುಕ್ರವಾರ ಮಾನ್ವಿಯ ಬುದ್ದಿನ್ನಿ ಸಮೀಪದ ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದಾರೆ ಎನ್ನುವ ಮಾಹಿತಿ ಪಡೆದಿದ್ದರು. ಇದರ ಸಂಬಂಧ ಶನಿವಾರ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಲಾರಿ ಚಾಲಕನೊಬ್ಬ ಅಧಿಕಾರಿಯನ್ನು ನೋಡುತ್ತಿದ್ದಂತೆ, ಅವರಿಂದ ತಪ್ಪಿಸಿಕೊಳ್ಳಲು ಸಾಹೇಬ್ ಪಟೇಲ್ ಮೇಲೆಯೇ ಲಾರಿ ಹರಿಸಿದ್ದ. ಪರಿಣಾಮ ಎರಡೂ ಕಾಲುಗಳು ಮೇಲೆ ಲಾರಿ ಹರಿದು ತೀವ್ರ ಸ್ವರೂಪದ ರಕ್ತಸ್ರಾವವಾಗಿತ್ತು. ಇದನ್ನು ಕಂಡ ಸ್ಥಳೀಯರು ಕೂಡಲೇ ಪಟೇಲ್ ರನ್ನು ಮಾನ್ವಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿಸಿದ್ದರು. ಆದರೆ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ಪಟೇಲ್ ಮೃತಪಟ್ಟಿದ್ದರು.

ಪಟೇಲ್ ರವರ ಹತ್ಯೆಯ ವಿಷಯ ತಿಳಿಯುತ್ತಿದ್ದಂತೆ ಜಿಲ್ಲೆಯ ಗ್ರಾಮಲೆಕ್ಕಾಧಿಕಾರಿಗಳು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಟ್ಟುಹಿಡಿದಿದ್ದರು. ಅಕ್ರಮ ಮರಳು ಸಾಗಾಣಿಕೆಯಲ್ಲಿ ಪ್ರಭಾವಿ ನಾಯಕರ ಹೆಸರು ಕೇಳಿಬರುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *