ಪ್ರೀತಿಸಿ ಮದುವೆಯಾಗಿದ್ದಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Public TV
1 Min Read

ಮಂಗಳೂರು: ನೇಣು ಬಿಗಿದುಕೊಂಡು ವಿವಾಹಿತೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ಸುರತ್ಕಲ್‍ (Mangaluru Suratkal) ನ ಬಾಳ ಗ್ರಾಮದಲ್ಲಿ ನಡೆದಿದೆ.

ಬಾಳ ನಿವಾಸಿ ದಿವ್ಯಾ (26) ಮೃತ ಮಹಿಳೆ. ದಿವ್ಯಾ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನೆಂದು ತಿಳಿದುಬಂದಿಲ್ಲ.

ಏನಿದು ಪ್ರಕರಣ..?: ದಿವ್ಯಾ ತನ್ನ ಪತಿ ಜೊತೆ ನೆರೆ ಮನೆಯ ಕಾರ್ಯಕ್ರಮವೊಂದಕ್ಕೆ ಹೋಗಿದ್ದರು. ಆದರೆ ಕಾರ್ಯಕ್ರಮ ಮುಗಿಸಿ ದಿವ್ಯಾ ಒಬ್ಬರೇ ಮನೆಗೆ ವಾಪಸ್ಸಾಗಿದ್ದರು. ಇದನ್ನೂ ಓದಿ: `ಖಲಿಸ್ತಾನ್ ಜಿಂದಾಬಾದ್’ ಘೋಷಣೆ ಬರೆದು ಇಸ್ಕಾನ್ ದೇವಾಲಯದ ಗೋಡೆ ವಿರೂಪ

ಪತಿ ಸ್ವಲ್ಪ ತಡವಾಗಿ ಕಾರ್ಯಕ್ರಮದಿಂದ ಹೊರಟು ಬಂದರು. ಮನೆಗೆ ಬಂದಾಗಿ ದಿವ್ಯಾ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಸದ್ಯ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ.

ಪ್ರೀತಿಸಿ ಮದುವೆ: ಮೃತ ದಿವ್ಯಾ ಮೆಡಿಕಲ್ ಶಾಪ್ (Medical Shop) ನಲ್ಲಿ ಕೆಲಸ ಮಾಡಿಕೊಂಡಿದ್ದರು. ಪತಿ ಹರೀಶ್ ಆಟೋ ಚಾಲಕರಾಗಿ ದುಡಿಯುತ್ತಿದ್ದರು. ವರ್ಷಗಳ ಹಿಂದೆ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *