ಉಪಚುನಾವಣೆ, ಕಾಂಗ್ರೆಸ್ ಟಿಕೆಟ್‍ಗಾಗಿ ಭಾರೀ ಪೈಪೋಟಿ

Public TV
1 Min Read

ಹಾವೇರಿ: ರಾಜ್ಯದಲ್ಲಿ ಉಪಚುನಾವಣೆ ಕಾವು ಜೋರಾಗಿದ್ದು, ಹಾನಗಲ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‍ಗಾಗಿ ಭಾರಿ ಪೈಪೋಟಿ ಏರ್ಪಟ್ಟಿದೆ.

ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನದಿಂದ ಹಾನಗಲ್ ಕ್ಷೇತ್ರ ತೆರವಾಗಿದ್ದು, ಉಪಚುನಾವಣೆಯ ಟಿಕೆಟ್‍ಗಾಗಿ ಕಾಂಗ್ರೆಸ್ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಬೀಡುಬಿಟ್ಟಿದ್ದಾರೆ. ಹಾನಗಲ್ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಗಳಾಗಿರುವ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ಸಚಿವ ಮನೋಹರ ತಹಶೀಲ್ದಾರ ಸೇರಿದಂತೆ ಇನ್ನು ಆನೇಕರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಧ್ಯಕ್ಷರಾದ ಸಲೀಂ ಅಹಮ್ಮದ್, ಧ್ರುವನಾರಾಯಣರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: ಹಾನಗಲ್ ಉಪಚುನಾವಣೆ, ಪಂಚಮಸಾಲಿ ಸಮುದಾಯದಕ್ಕೆ ಟಿಕೆಟ್ ಕೊಡಿಸುವಂತೆ ಶ್ರೀಗಳ ಮೂಲಕ ಒತ್ತಡ

ಸ್ಥಳೀಯರಿಗೆ ಟಿಕೆಟ್ ನೀಡಬೇಕು ನಾವು ಗಂಡಸರೇ, ಟಿಕೆಟ್ ನೀಡದಿದ್ದರೆ ಕೆಲಸ ಮಾಡುವುದಿಲ್ಲ ಎಂದು ಮಾಜಿ ಸಚಿವ ಮನೋಹರ ತಹಶೀಲ್ದಾರ್ ಕೈ ನಾಯಕರಿಗೆ ಬಹಿರಂಗವಾಗಿಯೇ ಎಚ್ಚರಿಕೆಯನ್ನು ನೀಡಿದ್ದರು. ಇದರ ಬೆನ್ನಲ್ಲೆ ಹಾವೇರಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಲೀಂ ಅಹಮದ್, ಹಾಗೂ ಧ್ರುವನಾರಾಯಣರನ್ನು ಭೇಟಿ ಮಾಡಿ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಿದ್ದಾರೆ. ಇದನ್ನೂ ಓದಿ: ಹಾನಗಲ್ ಉಪಚುನಾವಣೆ- ಟಿಕೆಟ್‍ಗಾಗಿ ಬಿಜೆಪಿ, ಕಾಂಗ್ರೆಸ್ ಆಕಾಂಕ್ಷಿಗಳು ತೆರೆಮರೆಯ ಕಸರತ್ತು

ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿಗೆ ಅನುಕಂಪದ ಅಲೆಯಿದ್ದು, ಉದಾಸಿ ಕುಟುಂಬಕ್ಕೆ ಬಿಜೆಪಿ ಟಿಕೆಟ್ ನೀಡುತ್ತದೆ ಎಂಬ ವಿಷಯ ದಟ್ಟವಾಗಿದೆ. ಮತ್ತೊಂದು ಕಡೆ ಕಾಂಗ್ರೆಸ್ ಹಾನಗಲ್ ಕ್ಷೇತ್ರವನ್ನು ತನ್ನದಾಗಿಸಿಕೊಳ್ಳಲು ಗೆಲ್ಲುವ ಕುದರೆಗೆ ಮಣೆಹಾಕಲು ಅಭ್ಯರ್ಥಿಗಳ ಹುಡುಕಾಟ ನಡೆಸಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಮೇಲೆ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ತೀವ್ರ ಕೂತುಹಲ ಕೇರಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *