ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಅಪಾರ ಪ್ರಮಾಣದ ಬೆಳೆ ನಾಶ

Public TV
1 Min Read

– ರಸ್ತೆ ಸಂಪರ್ಕ ಕಡಿತಗೊಂಡು ಜನರ ಪರದಾಟ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ (Chikkamagaluru) ಧಾರಾಕಾರವಾಗಿ ಮಳೆ (Rain) ಸುರಿದಿದ್ದು, ಭಾರೀ ಪ್ರಮಾಣದ ಬೆಳೆಗಳು ನಾಶವಾಗಿದೆ. ಅಲ್ಲದೇ ಗ್ರಾಮೀಣ ಭಾಗದಲ್ಲಿ ರಸ್ತೆ (Road) ಸಂಪರ್ಕ ಕಡಿತಗೊಂಡು ಜನರು ಪರದಾಡುತ್ತಿದ್ದಾರೆ.

ಬುಧವಾರ ಚಿಕ್ಕಮಗಳೂರಿನ ಹಲವೆಡೆ ವರುಣನ ಆಗಮನವಾಗಿದೆ. ಕಡೂರು (Kadur) ತಾಲೂಕಿನ ಸಖರಾಯಪಟ್ಟಣ (Sakharayapatna) ಸುತ್ತಮುತ್ತ ಭಾರೀ ಮಳೆಯಾಗಿದೆ. ಹುಲಿಕೆರೆ, ಕೇತಮಾರನಹಳ್ಳಿಯಲ್ಲಿ ಧಾರಾಕಾರ ಮಳೆಯಿಂದಾಗಿ ಅನಾಹುತ ಸೃಷ್ಟಿಯಾಗಿದೆ. ಮಳೆಯಿಂದಾಗಿ ಕೆರೆ ಕೋಡಿ ಬಿದ್ದುಹೋಗಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ಇದನ್ನೂ ಓದಿ: ಬಿಜೆಪಿಯಿಂದ ಸರಣಿ ಸಭೆ- ಸೋಲಿನ ಪರಾಮರ್ಶೆ ಮಾಡಲಿರುವ ನಾಯಕರು

ಕೋಡಿ ನೀರು ಜಮೀನು ಹಾಗೂ ಗದ್ದೆಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆಗಳು ನಾಶವಾಗಿದೆ. ಅಲ್ಲದೇ ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಕಡಿತಗೊಂಡು ಜನರು ಪರದಾಡುವಂತಾಗಿದೆ. ಬೆಳೆ ಚಿಗುರುವ ಸಮಯದಲ್ಲಿ ಭಾರೀ ಮಳೆ ಸುರಿದಿದ್ದು, ಮಳೆಯಿಂದಾಗಿ ನೀರು ಹೊಲದಲ್ಲಿ ನಿಂತು ಅಪಾರ ಬೆಳೆಗಳು ನಾಶವಾಗಿವೆ. ಇದನ್ನೂ ಓದಿ: ನಿಂತಿದ್ದ ಲಾರಿಗೆ ಶವ ಸಾಗಿಸ್ತಿದ್ದ ಅಂಬುಲೆನ್ಸ್ ಡಿಕ್ಕಿ- ಮೂವರ ದುರ್ಮರಣ!

Share This Article