ಸಿಎಎ, ಎನ್‌ಆರ್‌ಸಿ ವಿರೋಧಿಸಿ ಚಿಕ್ಕಬಳ್ಳಾಪುರದಲ್ಲಿ ಬೃಹತ್ ಹೋರಾಟ

Public TV
2 Min Read

– ಪ್ರತಿಭಟನೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಭಾಗಿ

ಚಿಕ್ಕಬಳ್ಳಾಪುರ: ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿಸಿ ಮುಸ್ಲಿಂ ಪೋರಂ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.

ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಗಮಿಸಿದ ಮುಸ್ಲಿಂ ಭಾಂಧವರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಡಳಿತ ಭವನದ ಬಳಿ ಜಮಾಯಿಸಿ ಪ್ರತಿಭಟನಾ ಧರಣಿ ನಡೆಸಿರು. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಕಾರರು ಜಿಲ್ಲಾಡಳಿತ ಭವನದ ಆವರಣದ ತುಂಬಾ ತುಂಬಿ ತುಳುಕಿದಿರು. ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಮುಸ್ಲಿಂ ವಿರೋಧಿ ನೀತಿ ತಾಳಿದ್ದು ಮುಸ್ಲಿಂ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡಲು ಹೊರಟಿದೆ ಎಂದು ಮುಖಂಡರು ಕೇಂದ್ರ ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಈ ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಹುನ್ನಾರ ಮಾಡಿದ್ದಾರೆ. ಹೀಗಾಗಿ ಇಂತಹ ದೇಶ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡಲು ಹೊರಟಿದ್ದಾರೆ ಎಂದು ಸಿಪಿಐ ಮುಖಂಡ ಜಿ.ವಿ ಶ್ರೀರಾಮರೆಡ್ಡಿ ಆಕ್ರೋಶ ಭರಿತ ಭಾಷಣ ಮಾಡಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ. ಅಂಜನಪ್ಪ ಮುಖಂಡರಾದ ಯಲವಳ್ಳಿ ರಮೇಶ್ ಕುಮಾರ್, ಸೇರಿದಂತೆ ನವೀನ್ ಕಿರಣ್ ಭಾಗವಹಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದೇ ವೇಳೆ ಪ್ರತಿಭಟನೆಗೆ ತಡವಾಗಿ ಆಗಮಿಸಿದ ಮಾಜಿ ಸಚಿವ ಶಿವಶಂಕರರೆಡ್ಡಿ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಹ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗಲಭೆಗೆ ಕಾಂಗ್ರೆಸ್ ನಾಯಕರೇ ಕಾರಣ ಎಂಬ ಸಂಸದ ಪ್ರತಾಪ ಸಿಂಹ ಹೇಳಿಕೆಗೆ ಮಾಜಿ ಸ್ಪೀಕರ್ ಸುರೇಶ್ ಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. ಇಂತಹ ವಿಷಯಗಳಲ್ಲಿ ಹುಡುಗಾಟಿಕೆ ಆಡೋದಕ್ಕಾತ್ತಾಗುತ್ತಾ? ನಾವು ಸಾರ್ವಜನಿಕ ಜೀವನದಲ್ಲಿ ಇರುವವರು ಎಲ್ಲವನ್ನೂ ರಾಜಕೀಯವಾಗಿ ಪರಿಗಣಿಸಬಾರದು, ಮನುಷ್ಯತ್ವ ರೂಢಿಸಿಕೊಳ್ಳಬೇಕೆಂದು ಸಂಸದ ಸಿಂಹಗೆ ತೀಕ್ಷ್ಣ ತಿರುಗೇಟು ನೀಡಿದರು.

ರಾಜ್ಯದಲ್ಲಿ ಇಬ್ಬರು ಅಮಾಯಕ ಜೀವಗಳು ಬಲಿಯಾದವು ಎಂದು ಮರುಕ ವ್ಯಕ್ತಪಡಿಸಿದ ಮಾಜಿ ಸ್ಪೀಕರ್, ಪೌರತ್ವ ಕಾಯ್ದೆ ಜಾರಿಗೆ ಜನ ಬೀದಿಗೆ ಬಂದಿದ್ರಾ? ಜನರನ್ನು ಬೀದಿಗೆ ತಳ್ಳಿದ್ದು ಯಾರು? ಪೌರತ್ವ ಕಾಯ್ದೆ ತಿದ್ದುಪಡಿ ಅವಶ್ಯಕತೆ ಇತ್ತಾ? ಮಾಡದಿದ್ರೆ ದೇಶಕ್ಕೇನಾದರೂ ಅನಾಹುತವಾಗ್ತಿತ್ತಾ? ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ದೇಶ ನಡೆಸುವ ಸ್ಥಿತಿ ಇದೇನಾ? ಎಂದು ಬಿಜೆಪಿ ನಾಯಕರಿಗೆ ಪ್ರಶ್ನಿಸಿದರು.

ಪೌರತ್ವ ಕಾಯ್ದೆ ಅಗತ್ಯತೆ ಇದ್ದಿದ್ದರೆ ಸ್ವಲ್ಪ ತಾಳ್ಮೆಯಿಂದ ಮಾಡಬೇಕಾಗಿತ್ತು. ದೇಶದ ಅಭಿವೃದ್ಧಿ ಮಾಡದೇ, ಬಿಜೆಪಿ ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು ಈ ರೀತಿಯ ಕಾಯ್ದೆಗಳನ್ನ ಜಾರಿಗೆ ತರುತ್ತಿದ್ದಾರೆ ಎಂದು ರಮೇಶ್ ಕುಮಾರ್ ಟೀಕಿಸಿದರು. ದೇಶದ ಸಂಸತ್ತಿನಲ್ಲಿ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲು ಕಾಂಗ್ರೆಸ್ ಪಕ್ಷ ಶಕ್ತಿಹೀನವಾಗಿದೆ. ಇಂತಹ ಸನ್ನಿವೇಶದಲ್ಲಿ ದೇಶವ್ಯಾಪ್ತಿ ಜನ ಬೀದಿಗೆ ಬರುವುದಕೆ ಕಾಂಗ್ರೆಸ್ ಕಾರಣ ಎಂದರೆ ಒಪ್ಪೋ ಮಾತಾ? ಎಂದು ಪ್ರಶ್ನಿಸಿದರು.

Share This Article
Leave a Comment

Leave a Reply

Your email address will not be published. Required fields are marked *