ಸಿದ್ದರಾಮಯ್ಯ ನಿಮಗೆ ಒಳ್ಳೆಯದಾಗಲಿ, ರಾಜಕೀಯವಾಗಿ ಹಾಳಾಗಿ ಹೋಗಿ – ಈಶ್ವರಪ್ಪ

Public TV
2 Min Read

ಉಡುಪಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (Siddaramaiah) ಒಳ್ಳೆಯದಾಗಲಿ, ರಾಜಕೀಯವಾಗಿ ಸಿದ್ದರಾಮಯ್ಯ ಹಾಳಾಗಿ ಹೋಗಲಿ ಎಂದು ಬಿಜೆಪಿ (BJP) ನಾಯಕ ಈಶ್ವರಪ್ಪ (K.S.Eshwarappa) ದೇವರಲ್ಲಿ ಬೇಡಿಕೊಂಡಿದ್ದಾರೆ.

ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ (Vijaya Sankalpa Yatra) ಉಡುಪಿಗೆ ಬಂದಿದ್ದು ಕಾರ್ಕಳ ಮತ್ತು ಉಡುಪಿ (Udupi) ವಿಧಾನಸಭಾ ಕ್ಷೇತ್ರದಲ್ಲಿ ರ‍್ಯಾಲಿ ಮತ್ತು ಸಭೆಗಳನ್ನು ನಡೆಸಿದೆ. ಈ ಸಂಬಂಧ ಮಣಿಪಾಲದಲ್ಲಿ (Manipal) ಪತ್ರಿಕಾಗೋಷ್ಠಿ ನಡೆಸಿದ ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ಕೃಷ್ಣ ಮಠಕ್ಕೆ (Krishna Math) ಬಾರದಿರುವ ಬಗ್ಗೆ ಗಮನ ಸೆಳೆದರು. ಇದನ್ನೂ ಓದಿ: ಸಿ.ಟಿ ರವಿಗೆ 20 ವರ್ಷ ಸಾಕಾಗಿಲ್ವಾ, ಏನು ಮಾಡಿದ್ದಾರೆ?- ಮತದಾರರಿಂದ ಕ್ಲಾಸ್ 

ಮುಖ್ಯಮಂತ್ರಿ ಆಗಿದ್ದ ಸಂದರ್ಭ ಸಿದ್ದರಾಮಯ್ಯನವರು ಬಹಳ ಸಲ ಉಡುಪಿಗೆ ಬಂದರು. ಆದರೆ ಒಮ್ಮೆಯೂ ಕೃಷ್ಣ ಮಠಕ್ಕೆ ಭೇಟಿ ನೀಡಲಿಲ್ಲ. ಭಕ್ತ ಕನಕದಾಸರ ಪುತ್ಥಳಿ ಕೃಷ್ಣ ಮಠದಲ್ಲಿದೆ. ಕನಕನಿಗೂ ಕೃಷ್ಣನಿಗೂ ವಿಶೇಷವಾದ ಸಂಬಂಧವಿದೆ. ಕೃಷ್ಣನ ಸ್ಪೂರ್ತಿ ಕನಕನಿಗೆ ಸಿಕ್ಕಿತು. ಇಂತಹ ಕ್ಷೇತ್ರಕ್ಕೆ ಸಿದ್ದರಾಮಯ್ಯ ಯಾಕೆ ಭೇಟಿ ನೀಡಲಿಲ್ಲ? ಮುಖ್ಯಮಂತ್ರಿ ಆಗಿದ್ದಾಗ ಸಿದ್ದರಾಮಯ್ಯ ಕೃಷ್ಣ ಮಠಕ್ಕೆ ಬರಲಿಲ್ಲ. ಕೃಷ್ಣನ ಶಾಪದಿಂದಲೇ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿರಿ. ಇನ್ನಾದರೂ ಕೃಷ್ಣಮಠಕ್ಕೆ ಬನ್ನಿ, ನಿಮಗೆ ಒಳ್ಳೆಯದಾಗುತ್ತದೆ ಎಂದು ಹಾರೈಸಿದರು. ಇದನ್ನೂ ಓದಿ: ಬಿಜೆಪಿ ವಕ್ರದೃಷ್ಟಿ – ಮೋದಿ ರೋಡ್‌ಶೋಗೆ ಕುಮಾರಸ್ವಾಮಿ ಒಕ್ಕಲಿಗ ಕಾರ್ಡ್ ಪ್ಲೇ

ಸಿದ್ದರಾಮಯ್ಯನವರ ಮೇಲೆ ಪ್ರೀತಿಯಿಂದ, ಅವರಿಗೆ ಒಳ್ಳೆಯದಾಗಲಿ ಎಂಬ ಉದ್ದೇಶದಿಂದ ಈ ಮಾತು ಹೇಳುತ್ತಿದ್ದೇನೆ. ರಾಜಕೀಯ (Politics) ಉದ್ದೇಶದಿಂದ ಈ ರೀತಿ ಹೇಳಲಿಲ್ಲ. ಪ್ರೀತಿ ಇಲ್ಲದೇ ಇದ್ದರೆ ರಾಜಕೀಯ ಮಾಡಲು ಸಾಧ್ಯವಿಲ್ಲ. ದೇಶದ್ರೋಹ ಹಾಗೂ ಧರ್ಮ ದ್ರೋಹಿಗಳನ್ನು ದ್ವೇಷಿಸಬೇಕು. ಸಿದ್ದರಾಮಯ್ಯನವರು ಎಲ್ಲಾ ಕಡೆ ದೇವಸ್ಥಾನಕ್ಕೆ ಹೋಗುತ್ತಾರೆ ಆದರೆ ಕೃಷ್ಣ ಮಠಕ್ಕೆ ಬರುವುದಿಲ್ಲ ಎಂದರು. ಇದನ್ನೂ ಓದಿ: ಮಂಡ್ಯ ಜನರ ಎದುರು ಮತ್ತೆ ಸಿಎಂ ಆಗುವ ಮಹಾದಾಸೆ ವ್ಯಕ್ತಪಡಿಸಿದ ಡಿಕೆಶಿ 

ಸಿದ್ದರಾಮಯ್ಯನವರು ಮಠಗಳಿಗೆ ಹಣವನ್ನು ಕೊಡುತ್ತಾರೆ, ಮುಖ್ಯಮಂತ್ರಿ ಆಗಿದ್ದಾಗ ನನಗೂ ಹಣ ಕೊಟ್ಟಿದ್ದಾರೆ. ನನ್ನ ಕ್ಷೇತ್ರದಲ್ಲಿರುವ ದೇವಸ್ಥಾನ ಹಾಗೂ ಮಠಗಳಿಗೂ ಸಿದ್ದರಾಮಯ್ಯ ಕೊಡುಗೆಗಳನ್ನು ಕೊಟ್ಟಿದ್ದರು. ನಾನು ಮಂತ್ರಿಯಾಗಿದ್ದಾಗ ಅವರ ಬೇಡಿಕೆಗಳಿಗೂ ಸ್ಪಂದಿಸಿದ್ದೇನೆ. ನಮ್ಮಿಬ್ಬರ ನಡುವೆ ಸ್ನೇಹವಿದೆ. ನಾವಿಬ್ಬರೂ ಚೆನ್ನಾಗಿದ್ದೇವೆ. ಪಕ್ಷದ ವಿಚಾರ ಬಂದಾಗ, ಮೋದಿಯನ್ನು (Narendra Modi) ಟೀಕೆ ಮಾಡಿದಾಗ ನಾನು ಯಾವ ಭಾಷೆ ಬಳಸಿದ್ದೇನೆ ಎಂದು ನಿಮಗೆ ಗೊತ್ತು. ಮೋದಿಯನ್ನು ನರಹಂತಕ ಎಂದು ಕರೆದರೆ ಸುಮ್ಮನೆ ಬಿಡುತ್ತೇವಾ ಎಂದು ಹಾರೈಕೆಯ ಜೊತೆ ಸಿದ್ದರಾಮಯ್ಯನವರ ಕಿವಿ ಹಿಂಡಿದರು. ಇದನ್ನೂ ಓದಿ: ಮಂಡ್ಯ ಬಿಜೆಪಿಗೆ ಸುಮಲತಾ ಬೂಸ್ಟರ್- ಹಾಡಿಹೊಗಳಿದ ಬಿ.ಎಲ್ ಸಂತೋಷ್

Share This Article
Leave a Comment

Leave a Reply

Your email address will not be published. Required fields are marked *