ಪಂಡಿತ್‌ ಕುಟುಂಬದ ಭೇಟಿ ತಡೆಯಲು ನನ್ನನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ: ಮುಫ್ತಿ

Public TV
1 Min Read

ಶ್ರೀನಗರ: ಇತ್ತೀಚೆಗೆ ಶೋಪಿಯಾನ್‍ನಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾದ ಕಾಶ್ಮೀರಿ ಪಂಡಿತ್ ಸುನೀಲ್ ಕುಮಾರ್ ಭಟ್ ಅವರ ಕುಟುಂಬವನ್ನು ಭೇಟಿ ಮಾಡುವುದನ್ನು ತಡೆಯಲು ನನ್ನನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಆರೋಪಿಸಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಗುಪ್ಕರ್ ಪ್ರದೇಶದಲ್ಲಿನ ತಮ್ಮ ನಿವಾಸದ ಗೇಟ್‍ಗೆ ಬೀಗ ಹಾಕಿರುವ ಹಾಗೂ ಮನೆ ಹೊರಗೆ ಸಿಆರ್‍ಪಿಎಫ್ ವಾಹನಗಳನ್ನು ನಿಲ್ಲಿಸಿರುವ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಒಂದೆಡೆ ಧರ್ಮ ಒಡೆಯೋ, ಮತ್ತೊಂದೆಡೆ ಸಾವರ್ಕರ್‌ಗೆ ಅವಹೇಳನ ಮಾಡ್ತಿರೋದನ್ನ ಜನ ಗಮನಿಸ್ತಿದ್ದಾರೆ: ಸಿದ್ದುಗೆ ವಿಜಯೇಂದ್ರ ಗುದ್ದು

ಕೇಂದ್ರದ ಕಠಿಣ ನೀತಿಯಿಂದಾಗಿ ಕಾಶ್ಮೀರಿ ಪಂಡಿತರ ಹತ್ಯೆ ಆಗುತ್ತಿದೆ. ಮುಖ್ಯ ವಾಹಿನಿಯಲ್ಲಿ ನನ್ನನ್ನು ಶತ್ರು ಎಂದು ಬಿಂಬಿಸುತ್ತಿದ್ದಾರೆ. ಆದರೆ ಇಂದು ನನ್ನನ್ನೇ ಗೃಹ ಬಂಧನದಲ್ಲಿ ಇರಿಸಲಾಗಿದೆ. ಈ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದರೆ, ಗೃಹ ಬಂಧನ ಮಾಡಿರುವುದು ಸ್ವಂತ ಭದ್ರತೆಗಾಗಿ ಎಂದು ಹೇಳುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮಧ್ಯಾಹ್ನ ನಾಟಿ ಕೋಳಿ ಊಟ ಮಾಡಿ ಸಂಜೆ ದೇವಸ್ಥಾನಕ್ಕೆ ಭೇಟಿ ಕೊಟ್ರಾ ಸಿದ್ದರಾಮಯ್ಯ?

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *