ಪಾದಯಾತ್ರೆಯಲ್ಲಿದ್ದ ಎಚ್.ಎಂ.ರೇವಣ್ಣಗೆ ಸೋಂಕು – ಕಾಂಗ್ರೆಸ್‍ನಿಂದ ರಾಜ್ಯಕ್ಕೆ ಕೊರೊನಾ ರಫ್ತು ಎಂದ ಬಿಜೆಪಿ

Public TV
3 Min Read

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಮುಖಂಡ ಎಚ್.ಎಂ ರೇವಣ್ಣ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.

ಈ ವಿಚಾರವನ್ನು ಪ್ರಸ್ತಾಪ ಮಾಡಿದ ಬಿಜೆಪಿ, ಕಾಂಗ್ರೆಸ್ ಪ್ರಾಯೋಜಿತ ಸುಳ್ಳಿನಜಾತ್ರೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಾಂಗ್ರೆಸ್ ಬೆಂಗಳೂರಿಗೆ ನೀರು ಕೊಡುತ್ತೇವೆ ಹೇಳಿ, ಈಗ ಬೆಂಗಳೂರಿಗೆ ಕೋವಿಡ್ ಸೋಂಕು ಹಂಚುತ್ತಿದೆ. ಡಿಕೆಶಿ ಅವರೇ ಕೋವಿಡ್‍ಯಾತ್ರೆ ಮುಂದುವರೆಸಿ ಬೆಂಗಳೂರನ್ನು ಕೋವಿಡ್ ಹಬ್ ಮಾಡುವ ಯೋಜನೆಯಿದೆಯೇ ಎಂದು ಪ್ರಶ್ನಿಸಿದೆ.

ಭಾನುವಾರ ಎಚ್‍ಎಂ ರೇವಣ್ಣ ನಗಾರಿ ಹೊಡೆಯುವ ಮೂಲಕ ಮೆಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ್ದರು. ಈ ವಿಚಾರವನ್ನೇ ಬಿಜೆಪಿ ಪ್ರಸ್ತಾಪಿಸಿ ಡಿಕೆ ಶಿವಕುಮಾರ್ ಅವರನ್ನು ಕುಟುಕಿದೆ.

ಮೊದಲನೇ ಅಲೆಯ ವೇಳೆ ದೇಶಾದ್ಯಂತ ಸುದ್ದಿಯಾಗಿದ್ದ ತಬ್ಲಿಘಿಗಳಿಗೆ ಕಾಂಗ್ರೆಸ್ಸನ್ನು ಹೋಲಿಸಿದೆ. ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಉಲ್ಬಣವಾದರೆ ಕಾಂಗ್ರೆಸ್ ತಬ್ಲಿಘಿಗಳೇ ನೇರ ಹೊಣೆ. ಕಾಂಗ್ರೆಸ್ ಪಾದಯಾತ್ರೆ ತಬ್ಲಿಘಿ ಸಮ. ಇಬ್ಬರೂ ಹರಡುತ್ತಿರುವುದು ಕೋವಿಡ್ ಸೋಂಕು. ತಬ್ಲಿಘಿಗಳು ಮೊದಲನೇ ಅಲೆಗೆ ಕಾರಣರಾದರೆ ಕಾಂಗ್ರೆಸ್ಸಿಗರು ಮೂರನೇ ಅಲೆಗೆ ಕಾರಣವಾಗುತ್ತಿದ್ದಾರೆ.

ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಸುಳ್ಳಿನಜಾತ್ರೆ ಈಗ ಕೊರೋನಾ ಮೂರನೇ ಅಲೆಯ ಸೂಪರ್ ಸ್ಪ್ರೆಡರ್ ಆಗುತ್ತಿದೆ. ಕೋವಿಡ್ ಮೊದಲನೇ ಅಲೆಯ ಸಂದರ್ಭದಲ್ಲಿ ದೇಶವನ್ನು ಕಾಡಿದ್ದ ತಬ್ಲಿಘಿಗಳ ರೀತಿ ಈಗ ಡಿಕೆಶಿ ಸೋದರರು ಪಾದಯಾತ್ರೆಯ ನೆಪದಲ್ಲಿ ರಾಜ್ಯದಲ್ಲಿ ಕೊರೋನಾ ಹಂಚುತ್ತಿದ್ದಾರೆ. ಕೋವಿಡ್ ಸೂಪರ್ ಸ್ಪ್ರೆಡರ್ ಕಾಂಗ್ರೆಸ್ ಎಂದು ಟ್ವೀಟ್ ಮಾಡಿದೆ.

ಟ್ವೀಟ್‍ನಲ್ಲಿ ಏನಿದೆ?:
ಕೊರೋನಾ ಸ್ಪ್ರೆಡರ್ ಡಿಕೆ ಸೋದರರೇ ನಿಮ್ಮ ಸುಳ್ಳಿನಜಾತ್ರೆ ಪ್ರಹಸನದಲ್ಲಿ ಇಪ್ಪತ್ತು ನಿಮಿಷ, ಅರ್ಧಗಂಟೆಯ ನಡಿಗೆ ನಾಟಕವಾಡುತ್ತಿರುವ ಕಾಂಗ್ರೆಸ್ ಪುಡಾರಿಗಳು ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಅವರೆಲ್ಲರೂ ಕೋವಿಡ್ ಸೋಂಕಿನ ಸಂಭಾವ್ಯ ವಾಹಕಗಳು. ರಾಜಧಾನಿಗೆ ಕೊರೊನಾ ಹಬ್ಬಿಸುವುದು ನಿಮ್ಮ ಉದ್ದೇಶವೇ? ಇದನ್ನೂ ಓದಿ: ಜನವರಿ ಅಂತ್ಯಕ್ಕೆ ನಿತ್ಯ 60 ಸಾವಿರ ಪ್ರಕರಣಗಳು ಪತ್ತೆ ಸಾಧ್ಯತೆ – ದೆಹಲಿಯಲ್ಲಿ ಖಾಸಗಿ ಕಚೇರಿಗಳು ಬಂದ್

ಬೆಂಗಳೂರಿಗೆ ನೀರು ಹಂಚುವುದಕ್ಕಾಗಿ ಈ ಪಾದಯಾತ್ರೆ ಎಂದು ಸುಳ್ಳಿನಜಾತ್ರೆ ಮಾಡುತ್ತಿರುವ ಕಾಂಗ್ರೆಸ್, ವಾಸ್ತವದಲ್ಲಿ ಬೆಂಗಳೂರಿಗೆ ಕೋವಿಡ್ ರಫ್ತು ಮಾಡುತ್ತಿದೆ. ಈ ಮೂಲಕ ಕೋವಿಡ್ ಸೋಂಕಿತ ಕಾಂಗ್ರೆಸಿಗರು ಊರಿಗೆಲ್ಲ ಸೋಂಕು ಹಂಚುತ್ತಿದ್ದಾರೆ. ಇದನ್ನೂ ಓದಿ: ಜನಪ್ರಿಯ ಗಾಯಕಿ ಲತಾ ಮಂಗೇಶ್ಕರ್‌ಗೆ ಕೊರೊನಾ – ಐಸಿಯುವಿನಲ್ಲಿ ಚಿಕಿತ್ಸೆ

Share This Article
Leave a Comment

Leave a Reply

Your email address will not be published. Required fields are marked *