ಮೇಕೆದಾಟು ಪಾದಯಾತ್ರೆಗೆ ತೆರಳಿದ್ದ 35ಕ್ಕೂ ಹೆಚ್ಚು ಕೈ ಮುಖಂಡರ ವಿರುದ್ಧ FIR ದಾಖಲು

Public TV
1 Min Read

ಚಾಮರಾಜನಗರ: ಮೇಕೆದಾಟು ಪಾದಯಾತ್ರೆಯಲ್ಲಿ (Mekedatu Padayatra) ಪಾಲ್ಗೊಳ್ಳಲು ಚಾಮರಾಜನಗರ ಜಿಲ್ಲೆಯಿಂದ ಹೋಗಿದ್ದ 35ಕ್ಕೂ ಹೆಚ್ಚು ಕೈ ಮುಖಂಡರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ನಿನ್ನೆ ನೂರಾರು ಕಾರ್ಯಕರ್ತರೊಂದಿಗೆ ಬಸ್‍ಗಳಲ್ಲಿ ಕನಕಪುರಕ್ಕೆ ತೆರಳಿದ್ದ ಕೈ ಮುಖಂಡರು ವಿರುದ್ಧ ಚಾಮರಾಜನಗರ ಗ್ರಾಮಾಂತರ ಹಾಗೂ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಡಿಕೆಶಿ, ಸಿದ್ದು ಸೇರಿ 30 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಐಪಿಸಿ ಸೆಕ್ಷನ್ 269, 188, ಪ್ರಕೃತಿ ವಿಕೋಪ ನಿರ್ವಹಣಾ ಅಧಿನಿ 51(B), ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 5(1)ದಂತೆ ಜಿಲ್ಲಾ ಪಂಚಾಯತ್ ಸದಸ್ಯ ಕೆರೆಹಳ್ಳಿ ನವೀನ್, ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್ ಸೇರಿದಂತೆ 35 ಕ್ಕೂ ಹೆಚ್ಚು ಮಂದಿ ಮೇಲೆ ಪ್ರಕರಣ ದಾಖಲಿಸಲಾಗಿದೆ. ಸೋಮವಾರ ಬೆಳಗ್ಗೆ ತಪಾಸಣೆ ವೇಳೆ ಸಾಮಾಜಿಕ ಅಂತರ ಇಲ್ಲದೆ, ಮಾಸ್ಕ್ ಧರಿಸದೆ, ಅಕ್ರಮ ಗುಂಪು ಸೇರಿ ಸಂಚಾರ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಶಬರಿಮಲೆಯಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂಬ ಕೂಗು

Share This Article
Leave a Comment

Leave a Reply

Your email address will not be published. Required fields are marked *