ಮೇಲುಕೋಟೆ | ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ – ಭೀಕರ ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Public TV
2 Min Read

ಮಂಡ್ಯ: ಮಗಳ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲು ಹತ್ಯೆ ಮಾಡಿದ್ದ ಆರೋಪಿಯ ತಂದೆಯನ್ನು ಶಿಕ್ಷಕಿಯ ತಂದೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಪಾಂಡವಪುರ (Pandavapura) ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ನಡೆದಿದ್ದು, ಅದರ ಸಿಸಿಟಿವಿ ಫೂಟೇಜ್ ಈಗ ಪೊಲೀಸರಿಗೆ ಲಭ್ಯವಾಗಿದೆ.

ನರಸಿಂಹೇಗೌಡ ಅವರ ಪುತ್ರ ನಿತೀಶ್, ವೆಂಕಟೇಶ್ ಅವರ ಪುತ್ರಿ ದೀಪಿಕಾಳನ್ನ ಕೊಲೆ ಮಾಡಿದ್ದ. 16 ತಿಂಗಳು ಕಾದು ಮಗಳ ಸಾವಿಗೆ ಪ್ರತೀಕಾರವಾಗಿ ಆಕೆಯ ತಂದೆ ವೆಂಕಟೇಶ್ ಆರೋಪಿ ನಿತೀಶ್‌ನ ತಂದೆಯನ್ನ ಹತ್ಯೆ ಮಾಡಿದ್ದ. ಇದನ್ನೂ ಓದಿ: ಮಗಳ ಸಾವಿಗೆ ಪ್ರತೀಕಾರ – ‘ತಮ್ಮ’ನ ಅಪ್ಪನನ್ನು ಬರ್ಬರವಾಗಿ ಕೊಂದ ತಂದೆ

ಎಡಕ್ಕೆ ಕೊಲೆಯಾದ ದೀಪಿಕಾ ಬಲಕ್ಕೆ ಇಂದು ಕೊಲೆಯಾದ ನರಸಿಂಹೇಗೌಡ

ಇದೇ ತಿಂಗಳ ಮೇ 6ರಂದು ಮಾಣಿಕ್ಯನಹಳ್ಳಿ (Manikyanahalli) ಗೇಟ್‌ ಬಳಿ ನರಸಿಂಹೇಗೌಡ ಟೀ ಕುಡಿಯಲು ಹೋಗಿದ್ದ, ಈ ವೇಳೆ ಸಹವಾಗಿಯೇ ಬಂದ ದೀಪಕಾಳ ತಂದೆ ನರಸಿಂಹನಿಗೆ ಚಾಕುವಿನಿಂದ ಚುಚ್ಚಿ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದ. ನನ್ನ ಮಗಳನ್ನ ಕೊಂದುಬಿಟ್ಟೆ ಅಲ್ವಾ? ನಿನ್ನ ಮಗಳ ಮದುವೆಯನ್ನ ಹೆಂಗೆ ಖುಷಿಯಾಗಿ ಮಾಡ್ತೀಯಾ? ನಿನ್ನನ್ನ ಬಿಡಲ್ಲ, ಮಗಳ ಕೊಂದ ನಿನ್ನ ಮಗನನ್ನೂ ಬಿಡಲ್ಲ ಎನ್ನುತ್ತಲೇ ಮನಸ್ಸೋ ಇಚ್ಚೆ ಚಾಕುವಿನಿಂದ ಇರಿದು, ಚುಚ್ಚಿ ಹತ್ಯೆ ಮಾಡಿದ್ದ. ಈ ಭೀಕರ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಳೆದ ರಾತ್ರಿ ಪೊಲೀಸರಿಗೆ ಲಭ್ಯವಾಗಿದೆ. ಇದನ್ನೂ ಓದಿ: ಮಣಿಪುರದ ಚಾಂದೆಲ್‌ನಲ್ಲಿ ಎನ್‌ಕೌಂಟರ್‌ – 10 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ

ಏನಿದು ಪ್ರಕರಣ?
ಟೀಚರ್ ದೀಪಿಕಾ ಮತ್ತು ನಿತೀಶ್ ಇಬ್ಬರು ಸ್ನೇಹ ಹಾಗೂ ಸಲುಗೆಯಿಂದಿದ್ದರು. ಇದನ್ನು ಗಮನಿಸಿದ ದೀಪಿಕಾ ಗಂಡ ಹಾಗೂ ಕುಟುಂಬಸ್ಥರು ನಿತೀಶ್‌ಗೆ ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ದೀಪಿಕಾ ಬಳಿ ಪ್ರಶ್ನಿಸಿದಾಗ ಆತ ನನಗೆ ತಮ್ಮ ಇದ್ದಂತೆ ಎಂದು ಹೇಳಿದ್ದಳು. ಕುಟುಂಬಸ್ಥರ ಎಚ್ಚರಿಕೆಯ ಬಳಿಕ ಇಬ್ಬರು ಅಂತರ ಕಾಯ್ದುಕೊಂಡಿದ್ದರು. ಇದನ್ನೂ ಓದಿ: ಚಾಮರಾಜನಗರ | ಮಳೆಯಾಗದಿದ್ದರೆ ಜಿಲ್ಲೆಯ 154 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ

ದೀಪಿಕಾ ಜೊತೆ ಒಡನಾಟವಿಲ್ಲದೇ ನಿತೀಶ್ ಕೋಪಗೊಂಡಿದ್ದ. ಬಳಿಕ 2024 ಜ. 22ರಂದು ನಿತೀಶ್ ಬರ್ತ್ಡೇ ನೆಪದಲ್ಲಿ ದೀಪಿಕಾಳನ್ನು ಬೆಟ್ಟದ ತಪ್ಪಲಿಗೆ ಕರೆಸಿಕೊಂಡಿದ್ದ. ದೀಪಿಕಾ ಆತನಿಗೆ ಶರ್ಟ್ ಗಿಫ್ಟ್ ಕೊಡಲು ಹೋಗಿದ್ದಳು. ಈ ವೇಳೆ ಇಬ್ಬರ ನಡುವೆ ಜಗಳ ಆರಂಭವಾಗಿ, ಕೊಲೆಯಲ್ಲಿ ಅಂತ್ಯವಾಗಿತ್ತು. ಮಂಡ್ಯ ಪೊಲೀಸರು ಕೊಲೆ ಆರೋಪಿ ನಿತೀಶ್‌ನನ್ನು ಬಂಧಿಸಿದ್ದರು.

ಜೈಲು ಸೇರಿದ್ದ ನಿತೀಶ್ ಜಾಮೀನಿನ ಮೇಲೆ ಹೊರ ಬಂದಿದ್ದ. ತನ್ನ ಮಗಳನ್ನು ಕೊಲೆ ಮಾಡಿದ್ದ ನಿತೀಶ್‌ನನ್ನು ಹೇಗಾದರೂ ಮಾಡಿ ಕೊಲೆ ಮಾಡಬೇಕೆಂದು ದೀಪಿಕಾ ತಂದೆ ವೆಂಕಟೇಶ್ ಹೊಂಚು ಹಾಕುತ್ತಿದ್ದ. ಇದೇ ಭಾನುವಾರ ಧರ್ಮಸ್ಥಳದಲ್ಲಿ ನಿತೀಶ್ ತಂಗಿ ಮದುವೆ ನಿಶ್ಚಯವಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ವೆಂಕಟೇಶ್ ನಿತೀಶ್ ತಂದೆ ನರಸಿಂಹೇಗೌಡರನ್ನ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಮೇಲುಕೋಟೆ ಶಿಕ್ಷಕಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಅಕ್ಕ ಅಕ್ಕ ಅಂತಾನೇ ಮೂಹೂರ್ತ ಇಟ್ಟನಾ?

ಕೊಲೆ ಮಾಡುವ ವೇಳೆ ನನ್ನ ಮಗಳನ್ನು ಕೊಲೆ ಮಾಡಿ ನಿನ್ನ ಮಗಳ ಮದುವೆ ಮಾಡ್ತಾ ಇದ್ದೀರಾ ಎಂದು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಮೇಲುಕೋಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ (Melukote Police Station) ಪ್ರಕರಣ ದಾಖಲಾಗಿದ್ದು, ಪೊಲೀಸರು ಕೊಲೆ ಆರೋಪಿ ವೆಂಕಟೇಶ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.  ಇದನ್ನೂ ಓದಿ: ಮೇಲುಕೋಟೆ ಶಿಕ್ಷಕಿ ಕೊಲೆ ಪ್ರಕರಣ – ಆರೋಪಿ ಅರೆಸ್ಟ್

Share This Article