ಚಾ.ನಗರ| ಕೃಷಿ ಹೊಂಡದಲ್ಲಿ ಮಹಿಳೆ, ಪುರುಷನ ಮೃತದೇಹ ಪತ್ತೆ

By
0 Min Read

ಚಾಮರಾಜನಗರ: ಕೃಷಿ ಹೊಂಡದಲ್ಲಿ ಮಹಿಳೆ ಮತ್ತು ಪುರುಷನ ಶವ ಪತ್ತೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆ.

ಗುಳ್ಯದ ಬಯಲು ಬಳಿ ಒಡೆಯರಪಾಳ್ಯ ನಿವಾಸಿಗಳಾದ ಮೀನಾಕ್ಷಿ (38) ಹಾಗೂ ರವಿ (40) ಎಂಬವರು ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಕೊಲೆ ಅಥವಾ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

Share This Article