ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆಗೆ ಬೆಂಕಿ ಹಚ್ಚಿದ ಇಬ್ಬರು ಅಂಕಲ್

Public TV
1 Min Read

ವಿಜಯಪುರ: ಪ್ರೀತಿ ನಿರಾಕರಿಸಿದ್ದಕ್ಕೆ ಹಾಗೂ ಆ ವಿಷಯವನ್ನು ಪೋಷಕರಿಗೆ ತಿಳಿಸಿದ ಕಾರಣ ಅಪ್ರಾಪ್ತ ಬಾಲಕಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆಯೊಂದು ಜಿಲ್ಲೆಯ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ನಡೆದಿದೆ.

ಪ್ರಾಜಕ್ತಾ ಬಲಭೀಮ ನರಳೆ(14) ಬೆಂಕಿಗೆ ಬಲಿಯಾದ ಅಪ್ರಾಪ್ತ ಬಾಲಕಿ. ಶಂಕರ್ ಹಿಪ್ಪರಕರ ಹಾಗೂ ಮೋಹನ್ ಎಡವೆ ಎಂಬ ಇಬ್ಬರು ಅಪ್ರಾಪ್ತೆಗೆ ಪ್ರೀತಿಸು ಎಂದು ಬೆನ್ನು ಬಿದ್ದಿದ್ದರು. ಆದರೆ ಅಪ್ರಾಪ್ತೆ ಇವರ ಪ್ರೀತಿಯನ್ನು ನಿರಾಕರಿಸಿ ತನ್ನ ಪೋಷಕರಿಗೆ ಈ ವಿಷಯವನ್ನು ತಿಳಿಸಿದ್ದಳು.

ಕೆಲ ದಿನಗಳಿಂದಲೂ ಪ್ರೀತಿಸು ಎಂದು ಅಪ್ರಾಪ್ತೆಗೆ ಶಂಕರ್ ಹಾಗೂ ಮೋಹನ್ ಕಿರುಕುಳ ನೀಡುತ್ತಿದ್ದರು. ಆಗ ಬಾಲಕಿ ಇಬ್ಬರ ಪ್ರೀತಿಯನ್ನು ನಿರಾಕರಿಸಿದ್ದಾಳೆ. ಆದರೆ ಇಬ್ಬರ ಕಿರುಕುಳ ಅತಿಯಾದಾಗ ಬಾಲಕಿ ಕಳೆದ ಶುಕ್ರವಾರ ಮನೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾಳೆ.

ಬಾಲಕಿ ಪೋಷಕರು ಪ್ರಾಜಕ್ತಳನ್ನು ಮರುದಿನ ಅಂದರೆ ಶನಿವಾರ ಶಾಲೆ ಬಿಡಿಸಿ ಮನೆಯಲ್ಲಿ ಇರಿಸಿಕೊಂಡಿದ್ದರು. ಇಬ್ಬರಿಗೂ ಮದುವೆಯಾಗಿದ್ರೂ, ಪ್ರಾಜಕ್ತ ಹಿಂದೆ ಬಿದ್ದಿದ್ದರು. ಪ್ರಾಜಕ್ತಾ ಶನಿವಾರ ಶಾಲೆಗೆ ಹೋಗದಿದ್ದಾಗ ಮನೆಯಲ್ಲಿ ವಿಷಯ ತಿಳಿಸಿದ್ದಾಳೆ ಎಂದು ತಿಳಿದ ಇಬ್ಬರು ಆರೋಪಿಗಳು ನಮ್ಮ ಮಗಳಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ಬಾಲಕಿಯ ಪೋಷಕರು ಆರೋಪಿಸುತ್ತಿದ್ದಾರೆ.

ಭಾನುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿಗಳು ಸೀಮೆ ಎಣ್ಣೆ ಹಾಕಿ ಬೆಂಕಿ ಹಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಬಾಲಕಿಯ ಪೋಷಕರು ಆರೋಪಿಸುತ್ತಿದ್ದಾರೆ. ಸದ್ಯ ಈ ಬಗ್ಗೆ ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *