ವಿಡಿಯೋ: ಆನಂದ್ ಗುರೂಜಿ ನಿವಾಸದ ಮೇಲೆ ಮಾಂಸದ ತುಂಡು, ಬಿಯರ್ ಬಾಟಲ್ ಎಸೆದ ಕಿಡಿಗೇಡಿಗಳು!

Public TV
1 Min Read

ಬೆಂಗಳೂರು: ಮಹರ್ಷಿ ಆನಂದ್ ಗುರೂಜಿ ಮನೆ ಮೇಲೆ ದುಷ್ಕರ್ಮಿಗಳು ಬಿಯರ್ ಬಾಟಲಿ ಮತ್ತು ಮಾಂಸದ ತುಂಡನ್ನು ಎಸೆದಿರುವ ಘಟನೆ ನಡೆದಿದೆ.

ಬನಶಂಕರಿ ಮೂರನೇ ಹಂತದ ಕಾಮಾಕ್ಯ ಬಡವಾಣೆಯಲ್ಲಿರುವ ಆನಂದ್ ಗುರುಜಿ ನಿವಾಸದ ಮೇಲೆ ದುಷ್ಕರ್ಮಿಗಳು ಬಿಯರ್ ಬಾಟಲಿ ಮತ್ತು ಮಾಂಸದ ತುಂಡನ್ನು ಎಸೆದಿದ್ದಾರೆ. ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮನೆಯ ಮೇಲೆ ಮತ್ತು ಬಾಗಲಿಗೆ ಬಿಯರ್ ಬಾಟಲಿ ಒಡೆದು ಮಾಂಸ ಎಸೆದು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳ ಈ ಕೃತ್ಯ ಆನಂದ್ ಗುರುಜಿ ಮನೆಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗೋವಿನ ಬಗ್ಗೆ ಆನಂದ್ ಗುರೂಜಿಯ ವಿಶೇಷ ಕಾರ್ಯಕ್ರಮ ನಾಳೆ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುವ ಹಿನ್ನಲೆಯಲ್ಲಿ ದುಷ್ಕರ್ಮಿಗಳು ಈ ರೀತಿಯ ಕೃತ್ಯವೆಸಗಿರಬಹುದು ಅಂತ ಆನಂದ್ ಗುರೂಜಿ ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ಸಿಸಿಟಿವಿ ದೃಶ್ಯಾವಳಿಗನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

https://www.youtube.com/watch?v=gwXEy-dY6SA&feature=youtu.be

 

Share This Article
Leave a Comment

Leave a Reply

Your email address will not be published. Required fields are marked *