ಶಾಸಕ ಎಸ್.ಎ ರಾಮದಾಸ್‍ಗೆ ಲಘು ಹೃದಯಾಘಾತ

Public TV
0 Min Read

ಮೈಸೂರು: ಜಿಲ್ಲೆಯ ಕೆ.ಆರ್. ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎ ರಾಮದಾಸ್ ಅವರಿಗೆ ಇಂದು ಬೆಳಗ್ಗಿನ ಜಾವ ಲಘು ಹೃದಯಾಘಾತವಾಗಿದೆ.

ಹೃದಯಾಘಾತವಾದ ತಕ್ಷಣ ರಾಮ್‍ದಾಸ್ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯಾಘಾತದ ಪರಿಣಾಮ ಶಾಸಕ ರಾಮದಾಸ್‍ಗೆ ಸ್ಟಂಟ್ ಅಳವಡಿಕೆ ಮಾಡಲಾಗಿದ್ದು, ಆಪರೇಷನ್ ಯಶಸ್ವಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಸದ್ಯ ಅಪೋಲೋ ಆಸ್ಪತ್ರೆಯಲ್ಲಿ ರಾಮ್‍ದಾಸ್ ಅವರಿಗೆ ಚಿಕಿತ್ಸೆ ಮುಂದುವರಿದಿದೆ.

Share This Article
Leave a Comment

Leave a Reply

Your email address will not be published. Required fields are marked *