ರಾಜ್ಯದಲ್ಲಿ ಸಿಎಂ ಬದಲಾವಣೆ ಅನ್ನೋದು ಬಿಜೆಪಿ ಸೃಷ್ಟಿ: ಬೋಸರಾಜು

Public TV
2 Min Read

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಅನ್ನೋದು ಬಿಜೆಪಿಯವರ (BJP) ಸೃಷ್ಟಿ ಎಂದು ಸಚಿವ ಬೋಸರಾಜು (Boseraju) ಕಿಡಿಕಾರಿದ್ದಾರೆ.

ಸಿಎಂ ಸ್ಥಾನ ಬದಲಾವಣೆ ಆಗುತ್ತೆ ಎಂದು ವಿಪಕ್ಷ ನಾಯಕರು ಹೇಳಿಕೆ ನೀಡಿದ್ದ ವಿಚಾರಕ್ಕೆ ಅವರು ಪ್ರತಿಕ್ರಿಯಿಸಿದರು. ಸಿಎಂ ಬದಲಾವಣೆ ವಿಚಾರ ಸರ್ಕಾರ ಬಂದಾಗಿಂದ ನಡೆಯುತ್ತಿದೆ. ಇದನ್ನು ಯಾರು ಮಾಡ್ತಿದ್ದಾರೆ? ಬಿಜೆಪಿಯವರು ಮಾಡ್ತಿದ್ದಾರೆ. ಸರ್ಕಾರವನ್ನ ವೀಕ್ ಮಾಡಬೇಕು, ಸಿಎಂ, ಡಿಸಿಎಂ ನಡುವೆ ಮನಸ್ತಾಪ ತಂದಿಡಬೇಕು ಎಂದು ಬಿಜೆಪಿಯವರು ಮಾಡ್ತಿದ್ದಾರೆ. ಬಿಜೆಪಿ, ಜೆಡಿಸ್ (JDS) ಸೇರಿ ಸರ್ಕಾರ ದುರ್ಬಲಗೊಳಿಸಲು ಇದನ್ನು ಮಾಡ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಕಾನೂನು, ಕಾಯ್ದೆ ಪ್ರಕಾರವೇ ಗ್ಯಾರಂಟಿಗೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣ ಬಳಕೆ: ಮಹದೇವಪ್ಪ

ಬಿ.ವೈ‌.ವಿಜಯೇಂದ್ರ (B.Y Vijayendra) ರಾಜ್ಯಾಧ್ಯಕ್ಷರಾಗಿಂದ ಎಷ್ಟು ಬಾರಿ ಹೇಳಿದ್ದಾರೆ. ಸಿಎಂ ಬದಲಾವಣೆ ಆಗುತ್ತೆ ಅಂತ? ವಿಪಕ್ಷ ನಾಯಕ ಆರ್.ಅಶೋಕ್ ಎಷ್ಟು ಬಾರಿ ಮಾತಾಡಿದ್ದಾರೆ? ರಾಜ್ಯಮಟ್ಟದ ನಾಯಕರಾಗಿರೋರು ಜವಾಬ್ದಾರಿಯುತವಾಗಿ ಮಾತಾಡಬೇಕು. ಅದನ್ನು ಬಿಟ್ಟು ದಿನಾಂಕ ಹೇಳುತ್ತಿದ್ದಾರೆ. ಜನರ ಇದನ್ನು ಎಲ್ಲರೂ ಗಮನಿಸುತ್ತಾರೆ. ನಾವು ಲೋಕಸಭೆ ಚುನಾವಣೆಯಲ್ಲಿ ಎಲ್ಲ ಸ್ಥಾನ ಗೆಲ್ಲಬೇಕು ಅಂದುಕೊಂಡಿದ್ದೆವು. ಈ ಬಾರಿ ಹೆಚ್ಚು ಸ್ಥಾನ ಗೆದ್ದಿದ್ದೇವೆ. ಬೊಮ್ಮಾಯಿ ಮಗ, ಕುಮಾರಸ್ವಾಮಿ ಮಗ ಉಪ ಚುನಾವಣೆಯಲ್ಲಿ ಸೋತಿದ್ದಾರೆ. ನಮಗೆ ಮೂರು ಸ್ಥಾನ ಉಪ ಚುನಾವಣೆ ಗೆಲುವಾಗಿದೆ. ಇದನ್ನ ಸಹಿಸಿಕೊಳ್ಳದೇ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಅವರಲ್ಲಿ ಎಷ್ಟು ಬಣಗಳಿವೆ. ಅವರದ್ದೇ ಮೂರು ಬಾಗಿಲು ಆಗಿದೆ. ಅಧ್ಯಕ್ಷರ ಬದಲಾವಣೆ ವಿಚಾರ ತಾರಕಕ್ಕೇರಿದೆ ಎಂದಿದ್ದಾರೆ.

ಸಚಿವ ರಾಜಣ್ಣ ಹಾಗೂ ಅನೇಕ ಕಾಂಗ್ರೆಸ್ (Congress) ಕ್ರಾಂತಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಣ್ಣ ಅವರು ಕಾಂಗ್ರೆಸ್ ಬದಲಾವಣೆ ಬಗ್ಗೆ ಹೇಳಿಲ್ಲ. ರಾಜ್ಯ ಕರ್ನಾಟಕದಲ್ಲಿ ಕ್ರಾಂತಿ ಆಗುತ್ತೆ ಎಂದು ಹೇಳಿರೋದು. ಕಾಂಗ್ರೆಸ್‌ನಲ್ಲಿ ಆಗುತ್ತೆ ಅಂತ ಅಲ್ಲ. ಡಿಕೆಶಿ ರಾಮನಗರ ಭಾಗದವರು ಹಾಗಾಗಿ ಇಕ್ಬಾಲ್ ಹುಸೇನ್ ಡಿಕೆಶಿ ಪರ ಮಾತನಾಡಿದ್ದಾರೆ. ಕೆಲವರು ಅವರ ವೈಯಕ್ತಿಕವಾಗಿ ಹೇಳಿಕೆ ನೀಡುತ್ತಾರೆ. ನಮ್ಮ ಪಕ್ಷದ ಹೈಕಮಾಂಡ್ ಯಾರು ಮಾತನಾಡಬಾರದು ಈಗಾಗಲೇ ಹೇಳಿದೆ. ಹೈಕಮಾಂಡ್ ತೀರ್ಮಾನವೇ ಅಂತಿಮ. ಸಿಎಂ, ಡಿಸಿಎಂ ಕೂಡ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆಯವರಿಗೆ ಎಲ್ಲಾ ಹುದ್ದೆ ಅನುಭವಿಸುವ ಅರ್ಹತೆ ಇದೆ: ಮಹದೇವಪ್ಪ

Share This Article