ಚುನಾವಣೆ ಗೆಲ್ಲೋಕೆ ಚೀಪ್ ಪಾಪ್ಯುಲಾರಿಟಿ ಮಾಡಬೇಕು- ಗ್ಯಾರಂಟಿಗಳ ಬಗ್ಗೆ ಕೃಷಿ ಸಚಿವ ಬಾಂಬ್

Public TV
1 Min Read

ಬೆಂಗಳೂರು: ಚುನಾವಣೆ ಗೆಲ್ಲೋಕೆ ಚೀಪ್ ಪಾಪ್ಯುಲಾರಿಟಿ ಮಾಡಬೇಕು ಎಂದು ಗ್ಯಾರಂಟಿಗಳ ಬಗ್ಗೆ ಕೃಷಿ ಸಚಿವ ಚೆಲುವರಾಯಸ್ವಾಮಿ (Chaluvarayaswamy) ಹೊಸ ಬಾಂಬ್ ಸಿಡಿಸಿದ್ದಾರೆ.

ಸದ್ಯ ಸಚಿವರ ಮಾತು ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಖತ್ ವೈರಲ್ ಆಗುತ್ತಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.

ಸಚಿವರು ಹೇಳಿರೋದು ಏನು?: ಫಲಿತಾಂಶಕ್ಕಾಗಿ ಎಲ್ಲವನ್ನೂ ಮಾಡಬೇಕು. ಚೀಪ್ ಪಾಪ್ಯುಲಾರಿಟಿ ಇಲ್ಲದ್ದು ಪಲ್ಲದ್ದು ಮಾಡಬೇಕು. ಸಿಎಂ ಸಿದ್ದರಾಮಯ್ಯಗೆ ಇಷ್ಟ ಆಗುತ್ತೋ ಇಲ್ಲವೋ ಮಾಡಬೇಕು. ನಮ್ಮ ಮನಸ್ಸಿಗೆ ಒಪ್ಪುತ್ತೋ ಇಲ್ಲವೋ ಆದರೂ ಮಾಡಬೇಕು. ಫಲಿತಾಂಶವೇ ಅನಿವಾರ್ಯ ರಿಸಲ್ಟ್ ಗಾಗಿ ಎಲ್ಲವನ್ನೂ ಮಾಡಬೇಕು ಅಂತ ಸಚಿವರು ಹೇಳಿದ್ದಾರೆ.

ಒಟ್ಟಿನಲ್ಲಿ ಕಾಂಗ್ರೆಸ್ ಗ್ಯಾರಂಟಿ ಗೊಂದಲಗಳ ಮಧ್ಯೆ ಸಚಿವರ ಮಾತು ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Share This Article