ಸಚಿವ ಡಿ.ಕೆ ಶಿವಕುಮಾರ್ ಆಸ್ಪತ್ರೆಗೆ ದಾಖಲು

Public TV
1 Min Read

ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಗಂಟಲು ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಡಿ.ಕೆ ಶಿವಕುಮಾರ್ ಗುರುವಾರ ಜನರಲ್ ಚೆಕಪ್ ಮಾಡಿಸಿಕೊಳ್ಳಲು ಹೋಗಿದ್ದರು. ಚೆಕಪ್ ಮಾಡಿಸಿಕೊಂಡ ಡಿಕೆಶಿ ಆರೋಗ್ಯವಾಗಿದ್ದರು. ಆದರೆ ಇಂದು ಅವರಿಗೆ ಗಂಟಲು ನೋವು ಕಂಡುಬಂದ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಿವಕುಮಾರ್ ಅವರು ಗಂಟಲು ನೋವಿಗೆ ಸಂಬಂಧಿಸಿದಂತೆ ಸಣ್ಣ ಆಪರೇಷನ್‍ಗೆ ಒಳಗಾಗಿದ್ದಾರೆ. ಸದ್ಯ ಅವರು ಇಂದು ರಾತ್ರಿಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

ಆದಾಯ ತೆರಿಗೆ ಇಲಾಖೆ (ಐಟಿ) ದಾಖಲಿಸಿದ್ದ ಮೂರು ಪ್ರಕರಣಗಳಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಗುರುವಾರ ಬಿಗ್ ರಿಲೀಫ್ ಸಿಕ್ಕಿದೆ. ಮೂರು ಆರೋಪಗಳಿಂದ ಮುಕ್ತವಾದರೂ ಸಚಿವ ಡಿಕೆ ಶಿವಕುಮಾರ್ ಅವರಿಗೆ ಫುಲ್ ರಿಲೀಫ್ ಸಿಕ್ಕಿಲ್ಲ. ಏಕೆಂದರೆ ಸಚಿವರ ಬಳಿ ಅಘೋಷಿತ ಆಸ್ತಿ ಇದೆ ಎಂದು ಸಾಬೀತು ಪಡಿಸುವ ಸಾಕ್ಷ್ಯಗಳಿದ್ದರೆ ಹೊಸದಾಗಿ ದೂರು ದಾಖಲಿಸಬಹುದು ಎಂದು ಐಟಿಗೆ ಕೋರ್ಟ್ ಅವಕಾಶ ನೀಡಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *