ಸಚಿವ ಜಿ.ಟಿ ದೇವೇಗೌಡ್ರು ತೆರಳ್ತಿದ್ದ ಕಾರಿಗೆ ಲಾರಿ ಡಿಕ್ಕಿ

Public TV
1 Min Read

ಮೈಸೂರು: ಉನ್ನತ ಸಚಿವ ಜಿ.ಟಿ ದೇವೇಗೌಡ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ಬಳಿ ನಡೆದಿದೆ.

ಸಚಿವ ಜಿ.ಟಿ ದೇವೇಗೌಡ ಅವರು ಕಾರ್ಯಕ್ರಮ ನಿಮಿತ್ತ ಮಳವಳ್ಳಿ ಕಡೆಗೆ ಹೊರಟ್ಟಿದ್ದರು. ಲಾರಿ ಬೆಂಗಳೂರಿನಿಂದ ಮೈಸೂರಿನತ್ತ ಚಲಿಸುತ್ತಿತ್ತು. ಈ ವೇಳೆ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ಬಳಿ ಎದುರಿನಿಂದ ಬಂದ ಲಾರಿ ಜಿಟಿಡಿ ಇದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ಈ ಅಪಘಾತದಿಂದ ಸಚಿವರು ಸೇರಿದಂತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಅಪಘಾತ ಸಂಭವಿಸಿದ ಬಳಿಕ ಜಿ.ಟಿ ದೇವೇಗೌಡ ಅವರು ಅಪಘಾತಕ್ಕೆ ಒಳಗಾದ ಕಾರನ್ನು ಬಿಟ್ಟು ಬೇರೆ ಕಾರಿನಲ್ಲಿ ಪ್ರಚಾರಕ್ಕೆ ತೆರಳಿದ್ದಾರೆ.

ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಡ್ಯಾಮೇಜ್ ಆಗಿದೆ. ಎನ್.ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *