ಜಿ.ಟಿ ದೇವೇಗೌಡರಿಗೆ ಯಾವ ಖಾತೆ ಅನ್ನೋದು ಇನ್ನೆರಡು ದಿನಗಳಲ್ಲಿ ನಿರ್ಧಾರ: ಸಚಿವ ಸಾರಾ ಮಹೇಶ್

Public TV
1 Min Read

ಮೈಸೂರು: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಖಾತೆ ಬದಲಾವಣೆಗೆ ಒತ್ತಾಯಿಸುತ್ತಿದು, ಇನ್ನೆರಡು ದಿನಗಳಲ್ಲಿ ತಮ್ಮ ನಿರ್ಧಾರವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಲಿದ್ದಾರೆ ಎಂದು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ.

ಮೈಸೂರಿನಲ್ಲಿ ಗುರುವಾರ ವಿಶ್ವ ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಮಸ್ಯೆಯಿಂದಾಗಿ ಇಂದಿನ ವಿಶ್ವ ಯೋಗ ದಿನ ಕಾರ್ಯಕ್ರಮದಲ್ಲಿ ಸಚಿವ ಜಿ.ಟಿ.ದೇವೇಗೌಡ ಅವರು ಭಾಗವಹಿಸಿಲ್ಲ. ಇನ್ನೆರಡು ದಿನಗಳಲ್ಲಿ ಎಲ್ಲ ಸರ್ಕಾರಿ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಇದನ್ನು ಓದಿ: ಜಿಟಿಡಿಗೆ ಖಾತೆ ಬದಲಾವಣೆ?- ಎಚ್‍ಡಿಡಿ ಜೊತೆ ಸಿಎಂ ಮಾತುಕತೆ

ಉನ್ನತ ಶಿಕ್ಷಣ ಖಾತೆ ನನಗೆ ಬೇಡ, ಸಹಕಾರ ಇಲ್ಲವೇ, ಅಬಕಾರಿ ಖಾತೆ ನೀಡುವಂತೆ ಸಚಿವ ಜಿ.ಟಿ.ದೇವೇಗೌಡ ಅವರು ಪಟ್ಟು ಹಿಡಿದಿದ್ದರು. ಇದಕ್ಕೆ ಕಾರಣ ಉನ್ನತ ಶಿಕ್ಷಣ ಸಲಹೆಗಾರರಾಗಿ ಪ್ರೊ. ಕೆ.ಎಸ್.ರಂಗಪ್ಪ ಅವರನ್ನು ನೇಮಕ ಮಾಡಲಾಗುತ್ತಿದೆ ಎನ್ನಲಾಗುತ್ತಿತ್ತು. ಅಷ್ಟೇ ಅಲ್ಲದೆ ಕೆಲವು ದಿನಗಳಿಂದ ಯಾವುದೇ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸದೇ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿತ್ತು. ಇದನ್ನು ಓದಿ: ನಾನು ದೇವೇಗೌಡರ ಸಂಬಂಧಿ ಅಂತಾ ಉನ್ನತ ಹುದ್ದೆ ಸಿಗುತ್ತಿಲ್ಲ: ಪ್ರೊ. ರಂಗಪ್ಪ

Share This Article
Leave a Comment

Leave a Reply

Your email address will not be published. Required fields are marked *