ಸಿದ್ದರಾಮಯ್ಯ ಅಯೋಧ್ಯೆ ಭೇಟಿಯಲ್ಲಿ ತಪ್ಪೇನಿದೆ?: ಸಿಎಂ ಹೇಳಿಕೆ ಸಮರ್ಥಿಸಿದ ಸಚಿವ ಕೆ.ಎನ್ ರಾಜಣ್ಣ

Public TV
1 Min Read

ನವದೆಹಲಿ: ಜನವರಿ 22 ರ ಬಳಿಕ ಅಯೋಧ್ಯೆಯ ರಾಮಮಂದಿರಕ್ಕೆ (Ayodhya Ram Mandir) ಭೇಟಿ ನೀಡುವ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಹೇಳಿಕೆ ಸರಿಯಾಗಿದೆ. ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿದರೆ ಏನು ತಪ್ಪು ಎಂದು ಸಚಿವ ಕೆ.ಎನ್.‌ರಾಜಣ್ಣ (K.N.Rajanna) ಪ್ರಶ್ನಿಸಿದ್ದಾರೆ.

ಅಯೋಧ್ಯೆಗೆ ಭೇಟಿ ನೀಡುವ ಹೇಳಿಕೆ ಸಂಬಂಧ ದೆಹಲಿಯಲ್ಲಿ ಮಾತನಾಡಿದ ಅವರು, ಮಂದಿರಾ ಬಿಜೆಪಿ ನಾಯಕರ ಸ್ವತ್ತೆ. ಹಿಂದೆ ಹೇಳಿದ್ದು ಸರಿ, ಈಗ ಹೇಳುವುದು ಸರಿಯಾಗೇ ಇದೆ ಎಂದು ಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ವಿಜಯೇಂದ್ರ ಜೊತೆಗೆ ಮಂಪರು ಪರೀಕ್ಷೆಗೆ ಒಳಪಡಿಸುವುದಾದ್ರೆ ನಾನು ಸಿದ್ಧ: ಬಿ.ಕೆ ಹರಿಪ್ರಸಾದ್

ಬಿಜೆಪಿ ಹಿಂದೂಗಳನ್ನು ಗುತ್ತಿಗೆ ತೆಗೆದುಕೊಂಡಿದ್ದಾರಾ? ಅಥವಾ ಅವರಿಗೆ ಜಾಗೀರು ಕೊಟ್ಟಿದ್ದೀವಾ? ನಾವು ಹಿಂದೂಗಳು ಅಲ್ಲದೇ ಇನ್ನೇನು? ವೋಟಿಗಾಗಿ ಬಿಜೆಪಿ ಪದೇ ಪದೆ ಹಿಂದೂ ಹಿಂದೂ ಅಂತ ಹೇಳುತ್ತಾರೆ. ಅಂಬೇಡ್ಕರ್ ಹಿಂದೂವಾಗಿ ಸಾಯುವುದಿಲ್ಲ ಎಂದ್ರು ಯಾಕೆ? ಈ ರೀತಿ ಹಿಂದುತ್ವ ಸ್ವಾರ್ಥಕ್ಕೆ ಬಳಕೆ ಮಾಡಿಕೊಂಡರು ಎನ್ನುವ ಕಾರಣಕ್ಕೆ ವಿಮುಖವಾದರು ಎಂದು ತಿಳಿಸಿದ್ದಾರೆ.

ಈ ರೀತಿ ಮಾತನಾಡುವ ಬದಲು ಮೊದಲು ರಾಮಮಂದಿರಕ್ಕೆ ದಲಿತರನ್ನು ಬಿಡಲು ಹೇಳಿ. ಅಲ್ಲಿ ಒಬ್ಬ ದಲಿತ ಅರ್ಚಕನನ್ನು ನೇಮಕ ಮಾಡಲು ಹೇಳಿ. ಹಿಂದೂಗಳಿಗೆ ಅವರು ಏನು ಮಾಡಿದ್ದಾರೆ? ಬರೀ ಚುನಾವಣೆಗಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಸಿಎಂ ಅಯೋಧ್ಯೆಗೆ ಭೇಟಿ ನೀಡುವುದು ಸರಿಯಾಗಿದೆ ಎಂದು ಸಮರ್ಥಿಸಿದರು. ಇದನ್ನೂ ಓದಿ: ಕಾಂಗ್ರೆಸ್‌ನವ್ರು ಕೌರವರು, ರಾವಣನಂತೆ ವರ್ತಿಸುತ್ತಿದ್ದಾರೆ: ಯತ್ನಾಳ್ ಕಿಡಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿ ಬಗ್ಗೆ ಮಾತನಾಡಿ, ಖರ್ಗೆಯವರನ್ನು ನಾವು ಐವರು ಸಚಿವರು ಭೇಟಿಯಾಗಿದ್ವಿ. ಚುನಾವಣೆ ಕುರಿತು ಅವರ ಮಾತುಗಳು ನಮ್ಮ ಉತ್ಸಾಹ ಹೆಚ್ಚಿಸಿದೆ. ಚುನಾವಣೆಯಲ್ಲಿ ನಾವು ಹೆಚ್ಚು ಸ್ಥಾನಗಳು ಗೆಲ್ಲಬೇಕಿದೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದರು.

Share This Article