ನಾನು ಮುಖ್ಯಮಂತ್ರಿಯಾಗುತ್ತೇನೆಂದು ಎಲ್ಲಿಯೂ ಹೇಳಿಲ್ಲ: ಮುರುಗೇಶ್ ನಿರಾಣಿ

Public TV
1 Min Read

ಬಾಗಲಕೋಟೆ: ನಾನೂ ಮುಖ್ಯಮಂತ್ರಿಯಾಗುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ ಎನ್ನುವ ಮೂಲಕ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಶುಕ್ರವಾರ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣ ಪಂಚಾಯತಿ ತೆರೆದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮರ್ಥವಾಗಿದ್ದಾರೆ. ಅವರ ನೇತೃತ್ವದಲ್ಲಿ ಉತ್ತಮ ಕೆಲಸಗಳು ರಾಜ್ಯದಲ್ಲಿ ನಡೆಯುತ್ತಿವೆ. ಮುಂದಿನ ವಿಧಾನಸಭೆಯ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇದನ್ನೂ ಓದಿ:  ಹೆಲಿಕಾಪ್ಟರ್ ದುರಂತ ಬಗ್ಗೆ ಊಹಾಪೋಹ ನಿಲ್ಲಿಸಿ: ಐಎಎಫ್

ಒಂದೂವರೆ ವರ್ಷಗಳ ಕಾಲ ನಾನು ಮಂತ್ರಿಯಾಗಿದ್ದಿಲ್ಲ. ಈಗ ನಮ್ಮ ಪಕ್ಷದ ನಾಯಕರು ಮಂತ್ರಿ ಜವಾಬ್ದಾರಿ ನೀಡಿದ್ದಾರೆ ಅದನ್ನು ನಿಭಾಯಿಸಲು ಕೆಲಸ ಮಾಡುತ್ತಿದ್ದೇನೆ. ನನ್ನ ಬಗ್ಗೆ ಕೆಲವರು ಮಾತನಾಡುತ್ತಾರೆ. ಅದಕ್ಕೆಲ್ಲ ಉತ್ತರ ಕೊಡುವ ಅಗತ್ಯವಿಲ್ಲ ಎಂದು ಪರೋಕ್ಷವಾಗಿ ತಮ್ಮ ವಿರೋಧಿಗಳಿಗೆ ತಿರುಗೇಟು ನೀಡಿದರು.

ಸಮಸ್ತ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜನರಿಗೆ ಸೌಲಭ್ಯ ಸಿಗುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದೇವೆ. ಮಠಾಧೀಶರ ಒಕ್ಕೂಟದ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ. ಇದರ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನನ್ನನ್ನೂ ಯಾರೊಬ್ಬರೂ ಸಭೆಗೆ ಬರುವಂತೆ ಕರೆದಿಲ್ಲ. ಒಕ್ಕೂಟದ ಸಭೆಗೆ ಹೋಗಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ:  ಪತ್ನಿಯ ಶಿರಚ್ಛೇದ ಮಾಡಿ ಪೊಲೀಸ್ ಠಾಣೆಗೆ ಹೊತ್ತೊಯ್ದ

ವಿಧಾನ ಪರಿಷತ್ ಚುನಾವಣೆಯಲ್ಲಿ 15 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಮೂಲಕ ವಿಧಾನ ಪರಿಷತ್‍ನಲ್ಲಿ ನಮ್ಮ ಪಕ್ಷ ಸ್ಪಷ್ಟ ಬಹುಮತ ಬರಲಿದೆ. ಬೀಳಗಿ ಮತಕ್ಷೇತ್ರ ಬಿಟ್ಟು ಎಲ್ಲಿಯೂ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಬೀಳಗಿಯಲ್ಲೇ ನನ್ನ ರಾಜಕೀಯ ಶುರು ಮಾಡಿದ್ದೇನೆ. ಇಲ್ಲಿಯ ಮತದಾರರಿಂದಲೇ ಶಾಸಕನಾಗಿ, ಮಂತ್ರಿಯಾಗಿದ್ದೇನೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *