ಸರ್ಕಾರಿ ಕಚೇರಿಗಳಿಗೆ ಸಚಿವ ಪ್ರಭು ಚೌವ್ಹಾಣ್ ದಿಢೀರ್ ಭೇಟಿ – ಅಧಿಕಾರಿಗಳಿಗೆ ಫುಲ್ ಕ್ಲಾಸ್

Public TV
1 Min Read

ಬೀದರ್: ಸರ್ಕಾರಿ ಕಚೇರಿಗಳಿಗೆ ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ದಿಢೀರ್ ಭೇಟಿ ನೀಡಿ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸಚಿವರು ದಿಢೀರ್ ಭೇಟಿ ನೀಡಿದರು. ಈ ವೇಳೆ ಗುಟಕಾ ತಿಂದು ಕಿಟಕಿ ಬಾಗಿಲಲ್ಲಿ ಊಗುಳಿ ಹೊಲಸು ಮಾಡಲಾಗಿತ್ತು. ಇದನ್ನು ಗಮನಿಸಿದ ಪ್ರಭು ಚೌವ್ಹಾಣ್ ಅವರು ಸ್ವಚ್ಚತೆ ಕಾಪಾಡದ್ದಕ್ಕೆ ತಾಲೂಕು ವೈದ್ಯಾಧಿಕಾರಿ ಡಾ. ಗಾಯತ್ರಿ ಅವರನ್ನು ತರಾಟೆ ತೆಗೆದುಕೊಂಡಿದ್ದಾರೆ.

ಔರಾದ್ ಪಟ್ಟಣ ಪಂಚಾಯತ್‍ನಲ್ಲಿ ಸಾಮೂಹಿಕವಾಗಿ ಗೈರಾದ ಅಧಿಕಾರಿ ಹಾಗೂ ಸಿಬ್ಬಂದಿ ಸೇರಿದಂತೆ ಒಟ್ಟು 16 ಜನ ಅಧಿಕಾರಿಗಳ ಪೈಕಿ 9 ಜನರಿಗೆ ಕಾರಣ ಕೇಳಿ ನೋಟಿಸ್ ನೀಡಿವಂತೆ ನಗರಾಭಿವೃದ್ಧಿ ಇಲಾಖೆಗೆ ಸೂಚನೆ ನೀಡಿದರು.

ಇದೇ ವೇಳೆ ಆಸ್ಪತ್ರೆಯಲ್ಲಿ ಒಂದು ವರ್ಷದಿಂದ ಗೈರಾದ ದಂತ ವೈದ್ಯ ಡಾ. ಮೆಹಬಿನ್ ಫೀರ್ದೊಸ್ ಎಂಬಾತನನ್ನು ಸಸ್ಪೆಂಡ್ ಮಾಡುವಂತೆ ಪ್ರಭು ಚೌವ್ಹಾಣ್ ಆದೇಶಿಸಿದ್ದಾರೆ. ಬಳಿಕ ಕೇಂದ್ರ ಸ್ಥಾನ ಬಿಟ್ಟು ಜಿಲ್ಲಾ ಕೇಂದ್ರದಲ್ಲಿ ವಾಸ್ತವ್ಯ ಮಾಡಿದ ಮುಖ್ಯಾಧಿಕಾರಿ, ಸಿಬ್ಬಂದಿಗೆ ಮೈ ಚಳಿ ಬಿಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *