ಬಿಜೆಪಿ ಷಡ್ಯಂತ್ರ ಒಂದೆರಡು ದಿನದಲ್ಲಿ ಬಹಿರಂಗ- ಸಚಿವ ಪ್ರಿಯಾಂಕ್ ಖರ್ಗೆ

Public TV
1 Min Read

ಚಾಮರಾಜನಗರ: ಸರ್ಜಿಕಲ್ ಸ್ಟ್ರೈಕ್ ಹಿಂದೆ ಷಡ್ಯಂತ್ರ ಇದೆ ಎಂಬ ಅನುಮಾನ ಜನರಲ್ಲಿ ಮೂಡುತ್ತಿದೆ. ಬಿಜೆಪಿಯ ಈ ಷಡ್ಯಂತ್ರ ಒಂದೆರೆಡು ದಿನದಲ್ಲಿ ಬಹಿರಂಗವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಚಾಮರಾಜನಗರದ ಬಿಳಿಗಿರಿರಂಗನಬೆಟ್ಟದಲ್ಲಿ ಮಾತನಾಡಿದ ಸಚಿವರು, ಭಾರತ ಹಾಗು ಪಾಕಿಸ್ತಾನ ಈ ಎರಡೂ ದೇಶಗಳಲ್ಲಿ ಯುದ್ಧೋನ್ಮಾದ ಸ್ಥಿತಿ ಉಂಟಾಗಿದ್ದರೂ ರಕ್ಷಣಾ ಸಚಿವರು ಎಲ್ಲಿ ಹೋಗಿದ್ದಾರೆ? ಇಷ್ಟೆಲ್ಲಾ ನಡೆಯುತ್ತಿದ್ದರೂ ಅವರೇಕೆ ಹೊರಗೆ ಬಂದಿಲ್ಲ ಎಂದು ಪ್ರಶ್ನಿಸಿದರು.

ಸರ್ಜಿಕಲ್ ಸ್ಟ್ರೈಕ್ ನಿಂದ ಬಿಜೆಪಿಗೆ ಅನುಕೂಲವಾಗಲಿದೆ ಎಂಬ ಯಡಿಯೂರಪ್ಪ ಹೇಳಿಕೆ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಕೇವಲ ವೋಟಿಗೋಸ್ಕರ ಅವರು ಯಾವ ಹಂತಕ್ಕಾದರು ಹೋಗುತ್ತಾರೆ ಎಂಬುದು ಇದರಿಂದ ಸಾಬೀತಾಗಿದೆ. ಯಡಿಯೂರಪ್ಪ ಅವರ ಮನಸ್ಸಿನಲ್ಲಿರುವುದು ಬಹಿರಂಗವಾಗಿದೆ 44 ಯೋಧರನ್ನು ಬಲಿಕೊಟ್ಟು 22 ಸೀಟು ಗೆಲ್ಲಲ್ಲು ಮುಂದಾಗಿದ್ದಾರೆಂದು ಅವರ ಹೇಳಿಕೆಯಿಂದ ಅರ್ಥವಾಗುತ್ತದೆ ಎಂದ್ರು.

ಬಿಎಸ್‍ವೈ ಹೇಳಿದ್ದೇನು..?
ಭಾರತೀಯ ವಾಯುಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಉಗ್ರರ ಮೇಲೆ ಭಾರತದ ವಾಯುಸೇನೆ ದಾಳಿಯ ಪರಿಣಾಮ ರಾಜ್ಯದಲ್ಲಿ 22 ಕ್ಕೂ ಹೆಚ್ಚು ಲೋಕಸಭೆ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಉಗ್ರರ ನೆಲೆಗಳ ಮೇಲೆ ಯಶಸ್ವಿಯಾಗಿ ನಡೆದ ಏರ್ ಸ್ಟ್ರೈಕ್ ನಿಂದಾಗಿ ದೇಶದಲ್ಲಿ ಬಿಜೆಪಿ ಪರ ಉತ್ತಮ ಅಲೆಯಿದೆ. ಭಾರತದಲ್ಲಿ ಇಂದಿನ ವಾತಾವರಣ ಭಾರತೀಯ ಜನತಾ ಪಕ್ಷದ ಪರವಾಗಿದೆ. ಪಾಕಿಸ್ತಾನದ ಒಳಗೆ ನುಗ್ಗಿ ನಮ್ಮ ವಾಯುಸೇನೆ ಉಗ್ರರ ನೆಲೆ ನಾಶ ಮಾಡಿದ್ದು ಸಂತೋಷವಾಗಿದೆ. ಅಲ್ಲದೇ 40 ವರ್ಷದ ಬಳಿಕ ಉಗ್ರ ನೆಲೆಗಳನ್ನು ಉಡೀಸ್ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಪರ ಅಲೆ ಇದೆ. ರಾಜ್ಯದಿಂದ 22 ಸಂಸದರನ್ನು ಕರೆದ್ಯೊಯ್ದು ಮೋದಿ ಅವರಿಗೆ ನಮ್ಮ ಕಾಣಿಕೆ ಕೊಡಬೇಕಿದೆ. ಅಲ್ಲಿಯವರೆಗೂ ನಾನು ಮನೆ ಸೇರುವುದಿಲ್ಲ ಎಂದು ಯಡಿಯೂರಪ್ಪ ಅವರು ಬುಧವಾರ ಚಿತ್ರದುರ್ಗದಲ್ಲಿ ಹೇಳಿದ್ದರು.

https://www.youtube.com/watch?v=-HDTIgjGwJg

https://www.youtube.com/watch?v=LLIlyAySnxg

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *