ಪಿಎಯಿಂದ ಚಪ್ಪಲಿ ತೊಡಿಸಿಕೊಂಡ ಪ್ರಕರಣಕ್ಕೆ ಸಚಿವ ಪುಟ್ಟರಂಗಶೆಟ್ಟಿ ಸ್ಪಷ್ಟನೆ

Public TV
1 Min Read

ಚಾಮರಾಜನಗರ: ಆಪ್ತ ಸಹಾಯಕನಿಂದ ಚಪ್ಪಲಿ ತೊಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.

ಕಾರಿನಲ್ಲಿದ್ದ ಚಪ್ಪಲಿಯನ್ನು ಆತ ನನ್ನ ಬಳಿ ತಂದಾಗ ಹಾಗೆ ತರಬಾರದು ಎಂದು ಹೇಳಿದೆ. ನನ್ನ ಚಪ್ಪಲಿ ಮುಟ್ಡಿದ್ದ ಆತನನ್ನು ಮುಟ್ಟಿ ನಮಸ್ಕರಿಸಿ ನಾನೇ ಚಪ್ಪಲಿ ಧರಿಸಿಕೊಂಡಿದ್ದೇನೆ. ನಾನು ಮಾನವೀಯತೆಗೆ ಬೆಲೆ ಕೊಡುವ ಮನುಷ್ಯ. ನಾನು ಯಾವುದೇ ತಪ್ಪು ಮಾಡಿಲ್ಲ. ಎಲ್ಲರನ್ನು ಸರಿಸಮನಾಗಿ ಕಾಣುವ ಗುಣ ನನ್ನದು. ಮಾಧ್ಯಮಗಳಲ್ಲಿ ಬಂದ ವರದಿಯಿಂದ ಮನ ನೊಂದಿದ್ದೇನೆ ಎಂದು ಪುಟ್ಟರಂಗಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.

ಆದರೆ ಪುಟ್ಟರಂಗಶೆಟ್ಟಿ ಚಪ್ಪಲಿ ಹಾಕಿಸಿಕೊಳ್ಳುವಾಗ ಪಿಎಗೆ ನಮಸ್ಕಾರ ಮಾಡಿಕೊಂಡಿಲ್ಲ. ಹೀಗಿದ್ದರೂ ಸಹ ನಾನು ನಮಸ್ಕಾರ ಮಾಡಿದ್ದೇನೆ ಎಂದು ಪುಟ್ಟರಂಗಶೆಟ್ಟಿ ಸಮರ್ಥನೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ವಿಡಿಯೋ: ಚಪ್ಪಲಿ ಹಾಕೋದ್ದಕ್ಕೂ ಪಿಎ ಇಟ್ಟುಕೊಂಡ ಸಚಿವ ಸಿ.ಪುಟ್ಟರಂಗಶೆಟ್ಟಿ!

ಸೋಮವಾರ ಚಾಮರಾಜನಗರದಲ್ಲಿ ಆಯೋಜಿಸಲಾಗಿದ್ದ ರೈತ ದಸರಾ ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು ತಮ್ಮ ಚಪ್ಪಲಿಯನ್ನು ಬಿಟ್ಟು ಎತ್ತಿನಗಾಡಿ ಏರಿದ್ದರು. ಎತ್ತಿನಗಾಡಿಯನ್ನು ಚಾಲನೆ ಮಾಡಿದ ನಂತರ ಅವರು ಕೆಳೆಗಿಳಿದು ನಡೆದು ಬರುತ್ತಿದ್ದಂತೆ ಅವರ ಆಪ್ತ ಸಹಾಯಕ ಪುಟ್ಟರಂಗಶೆಟ್ಟಿಗೆ ಚಪ್ಪಲಿ ತಂದು ತೊಡಿಸುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಸಚಿವ ಸಿ. ಪುಟ್ಟರಂಗಶೆಟ್ಟಿ ಸೌಜನ್ಯಕ್ಕಾದರೂ ಚಪ್ಪಲಿ ತೊಡಿಸುವ ತಮ್ಮ ಆಪ್ತ ಸಹಾಯಕನಿಗೆ ಬೇಡ ಎನ್ನದೇ ಸರ್ವಾಧಿಕಾರಿಯಂತೆ ಚಪ್ಪಲಿ ತೊಡಿಸಿಕೊಂಡು ಏನೂ ಆಗಿಲ್ಲವಂತೆ ನಡೆದು ಮುಂದೆ ಸಾಗಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=lPjIVJAvrF8

Share This Article
Leave a Comment

Leave a Reply

Your email address will not be published. Required fields are marked *