ಅಧಿಕಾರಿಗಳಷ್ಟೇ ಹೋಗಿ ಬೆಳೆ ಹಾನಿ ಬಗ್ಗೆ ಮಾಹಿತಿ ಸಂಗ್ರಹಿಸಿ: ಆರ್. ಅಶೋಕ್

Public TV
1 Min Read

ಚಿಕ್ಕಮಗಳೂರು: ರಾಜಕಾರಣಿಗಳು, ಮಂತ್ರಿಗಳು, ಶಾಸಕರನ್ನ ಕರೆದುಕೊಂಡು ಹೋಗಬೇಡಿ. ಅಧಿಕಾರಿಗಳಷ್ಟೆ ಹೋಗಿ ಬೆಳೆ ಹಾನಿ ಬಗ್ಗೆ ಮಾಹಿತಿ ಸಂಗ್ರಹಿಸಿ ಎಂದು ಕಂದಾಯ ಸಚಿವ ಆರ್. ಅಶೋಕ್ ಸೂಚನೆ ನೀಡಿದ್ದಾರೆ.

ಬೆಳಗಾವಿ, ಬಾಗಲಕೋಟೆ, ಹಾವೇರಿ, ಉತ್ತರಕನ್ನಡ, ಗದಗದಲ್ಲಿ ಭಾರೀ ಮಳೆಗೆ ಹೆಚ್ಚಿನ ಹಾನಿ ಸಂಭವಿಸಿದೆ. ಬೆಳಗಾವಿ 76 ಸಾವಿರ ರೈತರ ಬೆಳೆ ಹಾನಿ, ಬಾಗಲಕೋಟೆ 20 ಸಾವಿರ ರೈತರ ಬೆಳೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಹಣ ಬಿಡುಗಡೆ ಮಾಡಬೇಕಿತ್ತು, ಆ ಫೈಲ್ ನನ್ನ ಬಳಿ ಬಂದಿದೆ ಎಂದರು.

ನೀತಿ ಸಂಹಿತೆ ಇರೋದ್ರಿಂದ ಅನುಮತಿ ಕೇಳಿದ್ದೇನೆ, ಇಂದು-ನಾಳೆಯಲ್ಲಿ ಹಣ ಬಿಡುಗಡೆ ಮಾಡುತ್ತೇವೆ. ಕೋಟ್ಯಂತರ ಹಣ ಬಿಡುಗಡೆ ಮಾಡಬೇಕು, ಅನುಮತಿ ಸಿಕ್ಕರೆ ಮಾಡುತ್ತೇನೆ. ಎಲ್ಲೆಲ್ಲಿ ಫ್ಲಡ್, ಬೆಳೆಹಾನಿಯಾಗಿದೆ ಅವರಿಗೆಲ್ಲಾ 100 ಪರ್ಸೆಂಟ್ ಪರಿಹಾರ ಕೊಡುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಸಚಿವರ ಹೇಳಿಕೆಗೆ ಇದೀಗ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದು, ಹಾಗಾದ್ರೆ ಕ್ಷೇತ್ರದ ಶಾಸಕರು, ಮಂತ್ರಿಗಳು ಇರುವುದು ಯಾಕೆ..?. ಜನರ ಕಷ್ಟ ಕೇಳುವುದು ಬಿಟ್ಟು ಶಾಸಕರು, ಮಂತ್ರಿಗಳಿಗೆ ಬೇರೆನು ಕೆಲಸ ಇದೆ ಎಂದು ಪ್ರಶ್ನಿಸುತ್ತಿದ್ದಾರೆ. ಇದನ್ನೂ ಓದಿ: ಆರೋಗ್ಯಕ್ಕಾಗಿ ಹಸುವಿನ ಸಗಣಿ ತಿನ್ನುವ ವೈದ್ಯ – ವೀಡಿಯೋ ವೈರಲ್

Share This Article
Leave a Comment

Leave a Reply

Your email address will not be published. Required fields are marked *