ಮಕ್ಕಳು ಓದಿನ ಬಗ್ಗೆ ಗಮನ ನೀಡಿ, ಭವಿಷ್ಯ ರೂಪಿಸಿಕೊಳ್ಳಿ: ಆರ್. ಅಶೋಕ್

Public TV
1 Min Read

ಬೆಂಗಳೂರು: ಕರ್ನಾಟಕದ ಉಚ್ಛ ನ್ಯಾಯಾಲಯವು ವಸ್ತ್ರಸಂಹಿತೆಯ ಕುರಿತ ಪ್ರಕರಣದಲ್ಲಿ ತನ್ನ ತೀರ್ಪು ನೀಡಿದೆ. ಸಮವಸ್ತ್ರದ ಮಹತ್ವವನ್ನು ಎತ್ತಿ ಹಿಡಿದಿದೆ. ಹಿಜಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎನ್ನುವುದನ್ನು ಹೇಳಿದೆ. ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

ನಮ್ಮ ಮಕ್ಕಳ ಭವಿಷ್ಯ ಮುಖ್ಯ. ವಿದ್ಯೆಗಿಂತ ಮುಖ್ಯವಾದದ್ದು ಯಾವುದೂ ಇಲ್ಲ. ಹೀಗಾಗಿ ಉಚ್ಚ ನ್ಯಾಯಾಲಯದ ಮೂವರು ನ್ಯಾಯಮೂರ್ತಿಗಳ ಪೀಠ ನೀಡಿರುವ ತೀರ್ಪನ್ನು ನಾವೆಲ್ಲರೂ ಪಾಲಿಸಬೇಕು. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಬಹಳ ಮುಖ್ಯ. ಜೊತೆಗೆ ಎಲ್ಲ ಸಮುದಾಯದ ನಾಯಕರು ಪಾಲಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತೀರ್ಪನ್ನು ಒಪ್ಪಿಕೊಂಡು ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದರು. ಇದನ್ನೂ ಓದಿ: ವಿಧಾನಸಭೆಯಿಂದ ಟಿಡಿಪಿ ಪಕ್ಷದ 11 ಶಾಸಕರು ಅಮಾನತು

ಪರೀಕ್ಷೆಗಳಿಂದ ಹೊರಗುಳಿಯದೆ, ಎಲ್ಲರೂ ತರಗತಿಗಳಿಗೆ ಹಾಜರಾಗಬೇಕು, ನಿಮ್ಮ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳುವತ್ತ ಗಮನ ಹರಿಸಬೇಕು ಎಂದು ತಿಳಿದರು. ಇದನ್ನೂ ಓದಿ: ರಾಜ್ಯ ಸರ್ಕಾರದ ಒತ್ತಡದಿಂದ ಬಂದಿರುವ ತೀರ್ಪು: ಉಡುಪಿ ವಿದ್ಯಾರ್ಥಿನಿಯರು

 

Share This Article
Leave a Comment

Leave a Reply

Your email address will not be published. Required fields are marked *