ಹೇಮಾವತಿ ಜಲಾಶಯ ಭರ್ತಿ- ಸಚಿವ ರೇವಣ್ಣ ದಂಪತಿಯಿಂದ ವಿಶೇಷ ಪೂಜೆ

Public TV
1 Min Read

ಹಾಸನ: ಅನೇಕ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜೀವನದಿ ಹೇಮಾವತಿ ಜಲಾಶಯ ಭರ್ತಿಯಾಗಿದ್ದು, ಲೋಕೋಪಯೋಗಿ ಸಚಿವ ರೇವಣ್ಣ ದಂಪತಿಯಿಂದ ವಿಶೇಷ ಪೂಜೆ ನೆರವೇರಿದೆ.

ಸತತ ನಾಲ್ಕು ವರ್ಷಗಳಿಂದ ಗೊರೂರಿನಲ್ಲಿರುವ ಹೇಮಾವತಿ ನದಿ ತುಂಬಿರಲಿಲ್ಲ. ಆದರೆ ಮಳೆಯಿಂದಾಗಿ ಹೇಮಾವತಿ ಜಲಾಶಯ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಎಚ್.ಡಿ. ರೇವಣ್ಣ ದಂಪತಿ ವಿಶೇಷ ಪೂಜೆ ಮಾಡಿದ್ದಾರೆ. ಇದನ್ನೂ ಓದಿ: ಸತತ 4 ವರ್ಷಗಳ ನಂತರ ಹೇಮಾವತಿ ಭರ್ತಿ

ಹೇಮಾವತಿ ಭರ್ತಿಯಾದ ಹಿನ್ನೆಲೆಯಲ್ಲಿ ಜಲಾಶಯದ ಕ್ರಸ್ಟ್ ಗೇಟ್ ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಹೇಮಾವತಿ ನದಿ ಪಾತ್ರದಲ್ಲಿರುವ ಜನರಿಗೆ ಎಚ್ಚರಿಕೆ ನೀಡಲಾಗಿದೆ. ನಾಲ್ಕು ವರ್ಷಗಳ ನಂತರ ಜಲಾಶಯದಿಂದ ನೀರು ಹರಿಯುತ್ತಿದ್ದು, ಜಲಧಾರೆ ನೋಡಲು ಜನರು ಮುಗಿಬಿದ್ದಿದ್ದಾರೆ. ಇದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ 2,922 ಅಡಿಗಳಾಗಿದ್ದು, ಈಗ ನೀರಿನ ಮಟ್ಟ 2,919.37 ಅಡಿ ಇದೆ. ಜಲಾಶಯದಲ್ಲಿ 24,743 ಕ್ಯೂಸೆಕ್ ಒಳಹರಿವು ಇದೆ.

Share This Article
Leave a Comment

Leave a Reply

Your email address will not be published. Required fields are marked *