ದೋಸ್ತಿ ಸರ್ಕಾರದಲ್ಲಿ ಸಚಿವ ರೇವಣ್ಣ ಮತ್ತೆ ದರ್ಬಾರ್..!

Public TV
1 Min Read

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಸೂಪರ್ ಸಿಎಂ ಎಂದೇ ಸುದ್ದಿಯಾಗಿರುವ ಲೋಕೋಪಯೋಗಿ ಸಚಿವ ರೇವಣ್ಣ ಇದೀಗ ಮತ್ತೆ ತನ್ನ ದರ್ಬಾರ್ ಆರಂಭಿಸಿದ್ದಾರೆ.

ಎಂಜಿನಿಯರ್ ಗಳ ವರ್ಗಾವಣೆ ಆದೇಶ ಗಂಟೆಯೊಳಗೆ ಮಾರ್ಪಾಡು ಮಾಡಿದ್ದಾರೆ. ಸಚಿವ ರೇವಣ್ಣ ಮೌಖಿಕ ಸೂಚನೆ ಮೇರೆಗೆ ವರ್ಗಾವಣೆ ಆದೇಶ ಚೇಂಜ್ ಮಾಡಲಾಗಿದೆ. ಆದ್ರೆ ಇದಕ್ಕೆ ರೇವಣ್ಣ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಒಪ್ಪಿಗೆ ಪಡೆದಿಲ್ಲ ಎನ್ನಲಾಗಿದೆ.

ಸಣ್ಣ ನೀರಾವರಿ ಇಲಾಖೆ ಉತ್ತರ ವಲಯಕ್ಕೆ ರಾಮಕೃಷ್ಣ ವರ್ಗವಾಗಿದ್ದರು. ಆದ್ರೆ ಇದೀಗ ಅವರನ್ನು ಅಂತರ್ಜಲ ಅಭಿವೃದ್ಧಿ ನಿರ್ದೇಶನಾಲಯಕ್ಕೆ ವರ್ಗಾಯಿಸಲಾಗಿದೆ. ರೇವಣ್ಣ ಅವರ ಈ ನಡೆ ಬಗ್ಗೆ ಕಾಂಗ್ರೆಸ್ ಸಚಿವರು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *