ಶೃಂಗೇರಿ ನಂತರ ತಿರುಪತಿ ತಿಮ್ಮಪ್ಪನ ಮೊರೆ ಹೋದ ರೇವಣ್ಣ

Public TV
1 Min Read

ಬೆಂಗಳೂರು: ಸರ್ಕಾರ ಉಳಿಯಲಿ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ತಿರುಪತಿ ತಿಮ್ಮಪ್ಪನ ಮೊರೆ ಹೋಗಿದ್ದಾರೆ.

ರೇವಣ್ಣ ಅವರು ಇಂದು ಬೆಳ್ಳಂಬೆಳಗ್ಗೆ ತಿರುಪತಿಯಲ್ಲಿ ವೆಂಕಟೇಶ್ವರ ಸ್ವಾಮಿಯ ದರ್ಶನ ಮಾಡಿ, ಹೇಗಾದರೂ ಮಾಡಿ ಸರ್ಕಾರ ಉಳಿಸಪ್ಪ ಎಂದು ಬೇಡಿಕೊಂಡಿದ್ದಾರಂತೆ. ಅಲ್ಲದೆ ಕಳೆದ ಆರು ದಿನಗಳಿಂದ ಬರಿಗಾಲಲ್ಲೇ ಓಡಾಡುತ್ತಿರೋ ರೇವಣ್ಣ ಅವರಿಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಾಥ್ ನೀಡಿದ್ದಾರೆ. ಬುಧವಾರ ತಿರುಪತಿಗೆ ಹೋಗುವ ಮುನ್ನ, ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಗುತ್ತಿಗೆದಾರರಿಗೆ 1,500 ಕೋಟಿ ರೂ. ಬಿಲ್ ಚುಕ್ತಾ ಮಾಡಿದ್ದಾರೆ ಎನ್ನಲಾಗಿದೆ.

ಮಂಗಳವಾರ ಬೆಳಗ್ಗೆಯೇ ರೇವಣ್ಣ ಅವರು ಶೃಂಗೇರಿ ದೇವಾಲಯಕ್ಕೆ ಹೋಗಿ ಶಾರದೆಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಶಾರದಾಂಬೆ ದೇವೇಗೌಡರ ಕುಟುಂಬದ ಇಷ್ಟದ ದೇವರಾಗಿದ್ದು, ಹೀಗಾಗಿ ಒಂದೇ ವಾರದಲ್ಲಿ ಎರಡು ಬಾರಿ ಶೃಂಗೇರಿಗೆ ರೇವಣ್ಣ ಬಂದು ಪೂಜೆ ಸಲ್ಲಿಸಿದ್ದರು.

ಈ ಹಿಂದೆ ದೇವೇಗೌಡರು ಶೃಂಗೇರಿಯಲ್ಲಿ ಅತಿರುದ್ರ ಮಹಾಯಾಗ ನಡೆಸಿದ್ದರು. ನಂತರ ಸರ್ಕಾರಕ್ಕೆ ಸಂಚಕಾರ ಬಂದಾಗ ದೇವೇಗೌಡರು ಒಂದೊಂದು ಯಾಗ ನಡೆಸಿದ್ದರು. ಅಷ್ಟೇ ಅಲ್ಲದೇ ಸಿಎಂ ಕೂಡ ಶೃಂಗೇರಿಯಲ್ಲಿ ಮೂರ್ನಾಲ್ಕು ಯಾಗ ಮಾಡಿಸಿದ್ದರು. ಗುರುವಾರ ಸಚಿವ ರೇವಣ್ಣ ಮತ್ತೆ ಶಾರದಾಂಬೆ ದರ್ಶನ ಪಡೆದು ವಿಶೇಷ ಪೂಜೆ ಮಾಡಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *