ಜೆಡಿಎಸ್ ಉಳಿಸಲು ನಿಖಿಲ್‍ಗೆ ಟಿಕೆಟ್: ಸಚಿವ ಸಾರಾ ಮಹೇಶ್

Public TV
1 Min Read

ಚಾಮರಾಜನಗರ: ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳಸಿದ್ದು ವರಿಷ್ಠರಾದ ಹೆಚ್.ಡಿ ದೇವೇಗೌಡರು ಹಾಗೂ ಕುಮಾರಸ್ವಾಮಿ. ಇದೀಗ ಅವರು ಜೆಡಿಎಸ್ ಪಕ್ಷನ್ನು ಉಳಿಸಿಲು ನಿಖಿಲ್‍ಗೆ ಟಿಕೆಟ್ ನೀಡುತ್ತಿದ್ದಾರೆ. ಇದನ್ನು ಕುಟುಂಬ ರಾಜಕೀಯ ಎಂದು ಹೇಳುವ ಅವಶ್ಯಕತೆ ಇಲ್ಲ ಎಂದು ಸಚಿವ ಸಾ.ರಾ.ಮಹೇಶ್ ಸಮರ್ಥನೆ ಮಾಡಿಕೊಂಡಿದ್ದಾರೆ.

ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ಮಾತನಾಡಿದ ಅವರು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಆಗಬೇಕು ಎಂದು ಆಸೆ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಅವರನ್ನು ಮೈತ್ರಿ ಪಕ್ಷದಿಂದ ಕಣಕ್ಕೆ ಇಳಿಸಲಾಗುತ್ತಿದೆ. ನಿಖಿಲ್ ಜೆಡಿಎಸ್ ಪಕ್ಷವನ್ನು ಉಳಿಸುವ ದೃಷ್ಟಿಯಿಂದ ಅವರಿಗೆ ಟಿಕೆಟ್ ನೀಡಲಾಗುತ್ತಿದೆ. ಇದಕ್ಕೆ ಹಾಲಿ ಸಂಸದ ಶಿವರಾಮೇಗೌಡರ ಒಪ್ಪಿಗೆಯೂ ಸಹ ಇದೆ ಎಂದರು.

ಸಾಮಾಜಿಕ ಜಾಲ ತಾಣದಲ್ಲಿ ನಡೆಯುತ್ತಿರುವ ಅಭಿಯಾನ ಕೆಲವರ ಪಿತೂರಿಯಿಂದ ನಡೆಯುತ್ತಿದ್ದು, ಇದರ ಹಿಂದೆ ಯಾರಿದ್ದಾರೆ ಎನ್ನುವುದು ನಮಗೆ ತಿಳಿದಿದೆ ಎಂದರು. ಅಲ್ಲದೇ ಹೆಚ್.ಡಿ ದೇವೇಗೌಡರನ್ನು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಕರೆತರಲು ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *