ಗಣೇಶ್ ಹುಕ್ಕೇರಿ ಬಿಜೆಪಿ ಸೇರೋ ಬಗ್ಗೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ

Public TV
2 Min Read

– ಊಹಾಪೋಹಗಳಿಗೆ ಶಾಸಕ ಖಡಕ್ಕಾಗಿ ಪ್ರತಿಕ್ರಿಯೆ

ಬೆಳಗಾವಿ: ಚಿಕ್ಕೋಡಿ ಕಾಂಗ್ರೆಸ್ ಶಾಸಕ ಗಣೇಶ್ ಹುಕ್ಕೇರಿ ಅವರು ಬಿಜೆಪಿ ಸೇರುವ ವಿಚಾರ ಸತ್ಯಕ್ಕೆ ದೂರವಾಗಿದೆ. ಹಲವು ತಿಂಗಳಿನಿಂದ ಇಂತಹ ಸುದ್ದಿಗಳು ಕೇಳಿಬರುತ್ತಿವೆ. ಜನವರಿ 19ರಂದು ಬಿಜೆಪಿ ಸೇರುವ ಬಗ್ಗೆ ಹೇಳಿದ್ದಾರೆ. ಅಲ್ಲಿಯವರೆಗೆ ತಾಳ್ಮೆಯಿಂದ ಕಾಯೋಣ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಗಣೇಶ್ ಹುಕ್ಕೇರಿಗೆ ಯಾವುದೇ ಅಸಮಾಧಾನ ಇಲ್ಲ. ಈಗಾಗಲೇ ಅವರ ತಂದೆ ಸಂಸದರಿದ್ದಾರೆ. ಗಣೇಶ್ ಹುಕ್ಕೇರಿಗೂ ವರಿಷ್ಠರು ಪಕ್ಷದಲ್ಲಿ ಉನ್ನತ ಸ್ಥಾನ ನೀಡಿದ್ದಾರೆ. ಏಳು ತಿಂಗಳಿಂದ ಇದನ್ನೇ ಹೇಳುತ್ತಿದ್ದಾರೆ. ಅಮಿತ್ ಶಾ ಜೊತೆ ಇದ್ದಾರಾ ಅಥವಾ ಮೋದಿ ಜೊತೆಗೆ ನಮ್ಮ ಶಾಸಕರು ಇದ್ದಾರೆಯಾ ಹೇಳಿ. ಇನ್ನೂ ಯಾರು ಬಿಜೆಪಿಗೆ ಹೋಗಿಲ್ಲ ಹೋದಾಗ ನೋಡೋಣ ಅಂತ ಅವರು ಹೇಳಿದ್ರು.

ಯಾರು ಎಲ್ಲೂ ಹೋಗಲ್ಲ, ನಮ್ಮ ಪಕ್ಷ ಸುರಕ್ಷಿತವಾಗಿದೆ. ಕೆಲವರು ವೈಯಕ್ತಿಕ ಕೆಲಸದ ಮೇಲೆ ದೆಹಲಿಯಲ್ಲಿದ್ದಾರೆ. ಬಿಜೆಪಿಯವರು ಆರು ತಿಂಗಳಿನಿಂದ ಹೇಳ್ತಾನೆ ಇದ್ದಾರೆ ಅದನ್ನ ಪ್ರೂವ್ ಮಾಡೋಕು ಆಗ್ತಿಲ್ಲ. ಯಾರಾದ್ರೂ ದೊಡ್ಡ ಅಮೌಂಟ್ ಕೊಡ್ತೀನಿ ಅಂದ್ರೆ ಕೆಲವರು ಸ್ವಲ್ಪ ಯೋಚನೆ ಮಾಡ್ತಾರೆ. ಶನಿವಾರ ನಾನು, ಅವರು ಎರಡು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆವು. ಗಣೇಶ್ ಹುಕ್ಕೇರಿ ಅವರು ಬಿಜೆಪಿಗೆ ಹೋಗಲ್ಲ. ಹಲವು ತಿಂಗಳಿನಿಂದ ಇಂತಹ ಸುದ್ದಿಗಳು ಕೇಳಿಬರುತ್ತಿವೆ. ಆದರೆ ಯಾವುದೇ ಶಾಸಕರು ಬಿಜೆಪಿ ಸೇರಿಲ್ಲ. ಜನವರಿ 19ರಂದು ಬಿಜೆಪಿ ಸೇರುವ ಬಗ್ಗೆ ಹೇಳಿದ್ದರೆ ಆ ಬಗ್ಗೆ ಕಾದು ನೋಡೋಣ. ಒಟ್ಟಿನಲ್ಲಿ ನಮ್ಮ ಪಕ್ಷ ಸುಭದ್ರವಾಗಿದೆ ಅಂತ ಅವರು ಸ್ಪಷ್ಟಪಡಿಸಿದ್ರು.

ಗಣೇಶ್ ಸ್ಪಷ್ಟನೆ:
ಜನವರಿ 19ರಂದು ಶಾಸಕ ಗಣೇಶ್ ಹುಕ್ಕೇರಿಯವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ಸ್ವರ್ತ ಗಣೇಶ್ ಹುಕ್ಕೇರುಯವರೇ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹುಟ್ಟಿದಾಗಿನಿಂದ ಕಾಂಗ್ರೆಸ್ ಪಕ್ಷ ನನ್ನ ಮನೆ. ನನ್ನ ಮನೆಯನ್ನು ನಾನ್ಯಾಕೆ ತೊರೆದು ಹೋಗಲಿ ಎಂದು ಹೇಳುವ ಮೂಲಕ ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *