ಮಿಥುನ್ ರೈ ಎಲ್ಲಿ, ಸೆಲ್ಫಿ ತೆಗೆದುಕೊಳ್ಳಲು ಬರ್ಲಿ: ಶೋಭಾ ಕರಂದ್ಲಾಜೆ ತಿರುಗೇಟು

Public TV
1 Min Read

ಉಡುಪಿ: ಕೆಲ ದಿನಗಳ ಹಿಂದೆ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ (mithun Rai) ಅವರು ಸಚಿವೆ ಶೋಭಾ ಕರಂದ್ಲಾಜೆ ಕಂಡರೆ ಪೋಟೋ ತೆಗೆದು ಕಳುಹಿಸಿ. ನಾನು ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದರು. ಇದೀಗ ಶೋಭಾ ಅವರು, ಮಿಥುನ್ ರೈ ಎಲ್ಲಿದ್ದಾರೆ. ಸೆಲ್ಫಿ ತೆಗೆದುಕೊಳ್ಳಲು ಮೊದಲು ಅವರು ಬರಲಿ ಎಂದು ಸವಾಲೆಸೆದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಉಡುಪಿಗೆ ಬಂದಿದ್ದೇನೆ ಬನ್ನಿ ಎಲ್ಲರೂ ಸೆಲ್ಫಿ (Selfie) ತೆಗೆಯಿರಿ. ಅವ ಎಲ್ಲಿ ಮಿಥುನ್ ರೈ ಅವನು ಬರಲಿ ಎಂದು ಸಚಿವೆ ಗರಂ ಆಗಿ ಹೇಳಿದ್ದಾರೆ.  ಇದನ್ನೂ ಓದಿ: ಹೆಸರು ಬದಲಾಯಿಸಲು ತಲೆ ಕೆಟ್ಟಿದ್ಯಾ?: ಶೋಭಾ ಕರಂದ್ಲಾಜೆ ಗರಂ

ಬರಲಿ ಎಲ್ಲರೂ ಸೆಲ್ಫಿ ತೆಗೆಯಲು ಬರಲಿ. ಅವನು ಮಿಥುನ್ ರೈ ಫಸ್ಟ್ ಬರಲಿ. ಈ ವಿಷಯಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ. ಅವನನ್ನು ಯಾಕೆ ದೊಡ್ಡ ಮನುಷ್ಯ ಮಾಡಬೇಕು. ಅವನು ಚಿಲ್ಲರೆ ಮನುಷ್ಯ ಎಂದು ವಾಗ್ದಾಳಿ ನಡೆಸಿ ಶೋಭಾ ಕರಂದ್ಲಾಜೆ (Shobha Karandlaje) ಕಾರು ಹತ್ತಿದರು.

ಮಿಥುನ್ ರೈ ಹೇಳಿದ್ದೇನು..?: ಉಡುಪಿಯ ಮಲ್ಪೆ ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮಾಡುವಂತೆ ಕಾಂಗ್ರೆಸ್ ಪ್ರತಿಭಟನೆ ಮಾಡಿತ್ತು. ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ನಾಪತ್ತೆಯಾಗಿದ್ದಾರೆ. ಅವರ ಜೊತೆ ಸೆಲ್ಫಿ ತೆಗೆದವರಿಗೆ ಐದು ಸಾವಿರ ರೂಪಾಯಿ ಬಹುಮಾನ ಎಂದು ಮಿಥುನ್ ರೈ ಘೋಷಿಸಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *