ಸಿಎಂ ಬದಲಾವಣೆ ಬಗ್ಗೆ ಯಾರೂ ಮಾತನಾಡಿಲ್ಲ: ಶ್ರೀನಿವಾಸ ಪೂಜಾರಿ

Public TV
1 Min Read

ಹಾವೇರಿ: ಸಿಎಂ ಬದಲಾವಣೆ ಎಂಬ ಶಬ್ದಕ್ಕೆ ಅರ್ಥವೇ ಇಲ್ಲ. ಯಾರೂ ಸಿಎಂ ಬದಲಾವಣೆ ಬಗ್ಗೆ ಮಾತನಾಡಿಲ್ಲ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ನಗರದ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ ನಂತರದಲ್ಲಿ ನಮ್ಮ ಸರ್ಕಾರದ ಮತ್ತು ನಮ್ಮೆಲ್ಲರ ಗೌರವವು ಹೆಚ್ಚಿದೆ. ಅವರು ಅತ್ಯಂತ ಪಾರದರ್ಶಕತೆಯಿಂದ ಪ್ರತಿಯೊಬ್ಬ ಮಂತ್ರಿಗೂ ಮಾರ್ಗಸೂಚಿ ಹಾಕಿಕೊಟ್ಟು ಚೆನ್ನಾಗಿ ಕೆಲಸ ಮಾಡಿ ಅಂತಾ ಹೇಳಿದ್ದಾರೆ. ಏನಾದರೂ ಲೋಪದೋಷಗಳಿದ್ದರೇ ಸರಿಪಡಿಸಿಕೊಳ್ಳಿ ಎನ್ನುತ್ತಾರೆ ಎಂದರು. ಇದನ್ನೂ ಓದಿ:  365 ದಿನ ಕೆಲಸ ಮಾಡುವ ಶಕ್ತಿ ಇದೆ, ಪ್ರತಿ ದಿನ 15 ಗಂಟೆ ಕೆಲಸ ಮಾಡಿ ಬಿಜೆಪಿಯನ್ನು ಅಧಿಕಾರಕ್ಕೆ ಏರಿಸುತ್ತೇನೆ: ಬೊಮ್ಮಾಯಿ

ಬೊಮ್ಮಾಯಿ ಅವರು ಪಾರದರ್ಶಕ, ಪ್ರಾಮಾಣಿಕ ಮತ್ತು ಜನಪರ ಕೆಲಸಗಳನ್ನು ಮಾಡಲು ಚಿಂತನೆ ಮಾಡುತ್ತಿದ್ದಾರೆ. ಅವರು ಮುಖ್ಯಮಂತ್ರಿಗಳು ಮುಂದುವರಿಯುತ್ತಾರೆ. ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕರ್ನಾಟಕ ಬಂದ್ ಮಾಡುವ ಅನಿವಾರ್ಯತೆ ಇಲ್ಲ: ಸುನಿಲ್ ಕುಮಾರ್

Share This Article
Leave a Comment

Leave a Reply

Your email address will not be published. Required fields are marked *