ರಾಷ್ಟ್ರಪತಿಗಳಿಗೆ ಶ್ರೀ ರಾಮಾಯಣ ದರ್ಶನಂ, ಪರ್ವ ಕಾದಂಬರಿ ನೀಡಿದ ಸುನಿಲ್ ಕುಮಾರ್

Public TV
1 Min Read

ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಜ್ಯ ಪ್ರವಾಸದಲ್ಲಿದ್ದಾರೆ. ಇದೇ ವೇಳೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದರು.

ರಾಜಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸುನಿಲ್ ಕುಮಾರ್ ಅವರು ಕುವೆಂಪು ಅವರ ಶ್ರೀ ರಾಮಾಯಣ ದರ್ಶನಂ ಇಂಗ್ಲಿಷ್ ಅನುವಾದಿತ ಪುಸ್ತಕ ಹಾಗೂ ಡಾ.ಎಸ್.ಎಲ್.ಭೈರಪ್ಪ ಅವರ ಪರ್ವ ಕಾದಂಬರಿಯ ಇಂಗ್ಲಿಷ್ ಅನುವಾದಿತ ಕೃತಿಯನ್ನು ರಾಷ್ಟ್ರಪತಿಯವರಿಗೆ ಕೊಡುಗೆಯಾಗಿ ನೀಡಿದರು. ಇದನ್ನೂ ಓದಿ: ವಿಕ್ರಮಾದಿತ್ಯ ನೌಕೆಯಲ್ಲಿ ನಾವ್‌-ಇಕ್ಯಾಶ್‌ ಕಾರ್ಡ್‌ ಸೇವೆಗೆ ಚಾಲನೆ

ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ಈ ವೇಳೆ ಪರಸ್ಪರ ಕುಶಲೋಪರಿ ಮಾತನಾಡಿ, ಸಚಿವರು ವಿಶೇಷ ಉಡುಗೊರೆಗಳನ್ನು ರಾಷ್ಟ್ರಪತಿಗಳಿಗೆ ನೀಡಿದ್ದಾರೆ. ರಾಷ್ಟ್ರಪತಿ ಕೋವಿಂದ್ ಅವರು ಸಹ ಅಷ್ಟೇ ಸಂತೋಷದಿಂದ ಸ್ವೀಕರಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *