ಶೌಚಾಲಯ ಪರಿಶೀಲನೆ ನಡೆಸಿದ ಸಚಿವ ತಿಮ್ಮಣ್ಣ: ಮುಜುಗರಕ್ಕೀಡಾದ ಮಹಿಳೆಯರು

Public TV
1 Min Read

ಚಿಕ್ಕಮಗಳೂರು: ಬಸ್ ನಿಲ್ದಾಣದ ಶೌಚಾಲಯ ವ್ಯವಸ್ಥೆ ತಿಳಿಯಲು ಸಾರಿಗೆ ಸಚಿವ ಡಿಸಿ ತಿಮ್ಮಣ್ಣ ಅವರೇ ನೇರವಾಗಿ ಮಹಿಳಾ ಶೌಚಾಲಯಕ್ಕೆ ಹೋದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಸಾರಿಗೆ ಅಧಿಕಾರಿಗಳಿಗೆ ಚುರುಕು ಮುಟ್ಟಿಸಲು ಸಚಿವರು ಮುಂದಾಗಿದ್ದು, ಇಂದು ಚಿಕ್ಕಮಗಳೂರು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿದ್ದರು. ಹೀಗಾಗಿ ಶೌಚಾಲಯದ ವ್ಯವಸ್ಥೆ ತಿಳಿಯಲು ಪುರುಷರು ಹಾಗೂ ಮಹಿಳಾ ಶೌಚಾಲಯಗಳಿಗೆ ಸ್ವತಃ ತಾವೇ ಭೇಟಿ ನೀಡಿ ಪರಿಶೀಲನೆಗೆ ಮುಂದಾದರು. ಮಹಿಳಾ ಶೌಚಾಲಯಕ್ಕೆ ಸಚಿವರ ಭೇಟಿಯಿಂದಾಗಿ ನಿಲ್ದಾಣದಲ್ಲಿದ್ದ ಮಹಿಳೆಯರು ಮುಜುಗರಕ್ಕೆ ಒಳಗಾದರು.

ಶೌಚಾಲಯದಲ್ಲಿ ನೀರಿನ ವ್ಯವಸ್ಥೆ ಇಲ್ಲದಿರುವುದಕ್ಕೆ ಸಚಿವ ತಿಮ್ಮಣ್ಣ ಅವರು ಅಸಮಾಧಾನ ಹೊರಹಾಕಿ, ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು. ಅಲ್ಲದೇ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Share This Article
Leave a Comment

Leave a Reply

Your email address will not be published. Required fields are marked *