ಬೆಳ್ಳಂಬೆಳಗ್ಗೆ ಗಜಪಡೆ ಜೊತೆ ಸಚಿವ ವಿ.ಸೋಮಣ್ಣ ವಾಕಿಂಗ್

Public TV
1 Min Read

ಮೈಸೂರು: ದಸರಾ ಗಜಪಡೆಯ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವಾಕಿಂಗ್ ಮಾಡಿದ್ದಾರೆ.

ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ರಾಜಮಾರ್ಗದಲ್ಲಿ ಗಜಪಡೆಗಳ ಪಾದಯಾತ್ರೆ ನಡೆಸಲಾಗುತ್ತಿದೆ. ಸೋಮಣ್ಣ ಅವರು ಬೆಳ್ಳಂಬೆಳಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಪಾದಯಾತ್ರೆ ಮಾಡಿದರು. ಈ ವೇಳೆ ಜಂಬೂಸವಾರಿ ತೆರಳುವ ಮಾರ್ಗದಲ್ಲಿ ಕಾಮಗಾರಿ ಹಾಗೂ ಸ್ಥಳ ಪರಿಶೀಲನೆ ಮಾಡಿದರು.

ಅಲ್ಲದೆ ಜಂಬೂ ಸವಾರಿ ಮಾರ್ಗದ ಅಸುಪಾಸಿನಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಮಾಹಿತಿ ಕಲೆ ಹಾಕಿದರು. ನಗರದ ಕೋಟೆ ಆಂಜನೇಯ ದೇವಸ್ಥಾನದಿಂದ ಬನ್ನಿಮಂಟಪದವರೆಗೂ ಸೋಮಣ್ಣ ವಾಕಿಂಗ್ ಮಾಡಿದರು. ಈ ವೇಳೆ ವಿ. ಸೋಮಣ್ಣಗೆ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್. ನಾಗೇಂದ್ರ, ಮೇಯರ್ ಜಗನ್ನಾಥ್ ಸಾಥ್ ನೀಡಿದರು.

ಸಮಸ್ಯೆಗಳ ಬಗ್ಗೆ ಗಮನಹರಿಸಿ ಸ್ಥಳದಲ್ಲೇ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಸರಾಗೆ ಕಪ್ಪು ಚುಕ್ಕೆ ಬಾರದಂತೆ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *