ಬೊಗಳುವ ನಾಯಿ ಬೊಗಳುತ್ತಲೇ ಇರುತ್ತದೆ: ಬಿಜೆಪಿಗೆ ವೆಂಕಟರಮಣಪ್ಪ ಲೇವಡಿ

Public TV
1 Min Read

ಚಿತ್ರದುರ್ಗ: ಬೊಗಳುವ ನಾಯಿ ಬೊಗಳುತ್ತಲೇ ಇರುತ್ತದೆ ಎನ್ನುವಂತೆ ಬಿಜೆಪಿ ವರ್ತಿಸುತ್ತದೆ. ಯಡಿಯೂರಪ್ಪ ಹೇಳಿದಂತೆ ಆಗುವಂತಿದ್ದರೆ ಬಿಎಸ್‍ವೈ ಯಾವತ್ತೋ ಸಿಎಂ ಆಗಿರುತ್ತಿದ್ದರು ಎಂದು ಕಾರ್ಮಿಕ ಸಚಿವ ವೆಂಕಟರಮಣಪ್ಪ ಬಿಜೆಪಿಗೆ ಲೇವಡಿ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಾಕಷ್ಟು ಕಾಂಗ್ರೆಸ್ ಅತೃಪ್ತ ಶಾಸಕರು ಬಿಜೆಪಿ ಸೇರುತ್ತಾರೆ ಅಂತ ಬಿಜೆಪಿ ಅವರು ಸುಮ್ಮನೆ ಹೇಳಿಕೊಂಡು ತಿರುಗುತ್ತಿದ್ದಾರೆ. ಬೊಗಳುವ ನಾಯಿ ಬೊಗಳುತ್ತಲೇ ಇರುತ್ತದೆ. ಬಿಜೆಪಿ ಅವರಿಗೆ ಬೇರೆ ಕೆಲಸವಿಲ್ಲ. ಶಾಸಕ ಉಮೇಶ್ ಜಾಧವ್ ಒಬ್ಬ ರಾಜೀನಾಮೆ ನೀಡಿ ಬಿಜೆಪಿ ಸೇರುತ್ತಾರೆಂದು ಕಾಂಗ್ರೆಸ್ಸಿನ ಇತರೇ ಶಾಸಕರು ಬಿಜೆಪಿ ಸೇರುವುದಿಲ್ಲ. ಜಾಧವ್ ಅವರೊಬ್ಬರಿಂದ ಕಾಂಗ್ರೆಸ್ಸಿಗೆ ಏನೂ ಹಾನಿ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ:ಎಲ್ಲರಿಗೂ ದೇಶ, ಸೈನಿಕರ ಚಿಂತೆಯಾದರೆ ಬಿಎಸ್‍ವೈಗೆ ಸೀಟಿನ ಚಿಂತೆ: ಯು.ಟಿ ಖಾದರ್

ಪಕ್ಷಾಂತರ ಮಾಡಿದವರಿಗೆ ಜನ ಬುದ್ಧಿ ಕಲಿಸ್ತಾರೆ. ಯಾರು ಯಾರು ಎಲ್ಲೆಲ್ಲಿ ಅಭಿಮಾನವಿದೆ ಅಲ್ಲಿಗೆ ಹೋಗ್ತಾರೆ. ಇನ್ನೂ ನಾಲ್ಕುವರೆ ವರ್ಷ ಇರುವಾಗಲೇ ಜಾಧವ್ ರಾಜೀನಾಮೆ ಕೊಟ್ಟಿದ್ದಾರೆ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕೆಂದು ಹೇಳಿದರು. ಇದನ್ನೂ ಓದಿ:ಅವಳ ಸಪೋರ್ಟಿನಿಂದ ನೀನು ಹೀಗೆ ಮಾಡ್ತೀರೋದು: ಶಾಸಕರಿಬ್ಬರ ಜಗಳದಲ್ಲಿ ಮಹಿಳೆಯ ಎಂಟ್ರಿ

ಕಾಂಗ್ರೆಸ್ಸಿನವರು ಬಿಜೆಪಿ ಸೇರುತ್ತಾರೆ ಎನ್ನುವುದು ಬರೀ ಕನಸು. ಯಡಿಯೂರಪ್ಪನವರ ಕನಸು ನನಸಾಗುವುದೇ ಇಲ್ಲ. ಯಡಿಯೂರಪ್ಪ ಹೇಳಿದಂತೆ ಆಗುವಂತಿದ್ದರೆ ಯಾವತ್ತೋ ಸಿಎಂ ಆಗುತ್ತಿದ್ದರು. ಮೂರು ವರ್ಷಕ್ಕೆ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಲೂ ಇರಲಿಲ್ಲ ಎಂದು ಟಾಂಗ್ ನೀಡಿದರು.

ಶಾಸಕ ಗಣೇಶ್ ಹಾಗೂ ಆನದ್ ಸಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿ, ಅವರಿಬ್ಬರು ಫ್ರೆಂಡ್ಸ್. ವೈಯಕ್ತಿಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ ಅಷ್ಟೇ. ಒಂದೇ ತಾಯಿಯ ಮಕ್ಕಳು, ಅಣ್ಣ ತಮ್ಮಂದಿರು, ಗಂಡ-ಹೆಂಡತಿ ಕಿತ್ತಾಡುತ್ತಾರೆ. ಸಂಸಾರದ ಜಗಳ ತಾನಾಗಿಯೇ ಸರಿ ಆಗುತ್ತದೆ. ಹಾಗೆಯೇ ಇವರಿಬ್ಬರ ನಡುವೆ ಇರುವ ಭಿನ್ನಾಭಿಪ್ರಾಯ ಕೂಡ ಸರಿಯಾಗುತ್ತದೆ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *