ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆಗೆ ಮಂತ್ರಿ ಪಟ್ಟ

Public TV
1 Min Read

ನವದೆಹಲಿ: ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಕೇಂದ್ರ ಮಂತ್ರಿ ಸ್ಥಾನ ಸಿಕ್ಕಿದೆ.

ಭಾನುವಾರ ಬೆಳಗ್ಗೆ 10.30ಕ್ಕೆ ರಾಷ್ಟ್ರಪತಿ ಭವನದ ಅಶೋಕ ಹಾಲ್‍ನಲ್ಲಿ ಕೇಂದ್ರ ಸಂಪುಟ ಪುನಾರಚನೆ ಆಗಲಿದ್ದು ಹೊಸದಾಗಿ ಪ್ರಮಾಣವಚನ ಸ್ವೀಕರಿಸುವ ಸಚಿವರ  ಪಟ್ಟಿಯಲ್ಲಿ ಅನಂತ್ ಕುಮಾರ್ ಹೆಗಡೆಯವರಿಗೆ ಸ್ಥಾನ ಸಿಕ್ಕಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ತಿಳಿಸಿವೆ.

 ಬೆಳಗ್ಗೆ 9 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಹೊಸ ಸಚಿವರ ಪಟ್ಟಿ ಹರ್ದೀಪ್ ಸಿಂಗ್ ಪುರಿ, ಗಜೇಂದ್ರ ಶೇಖವತ್, ಅಶ್ವಿನಿಕುಮಾರ್ ಚೌಭೆ, ಶಿವ ಪ್ರತಾಪ್ ಶುಕ್ಲಾ, ರಾಜ್ ಕುಮಾರ್ ಸಿಂಗ್, ಸತ್ಯಪಾಲ್ ಸಿಂಗ್, ಅಲ್ಫಾನ್ಸೋ ಕಣ್ಣತನಂಗೆ ಸಚಿವ ಸ್ಥಾನ ಸಿಗಲಿದೆ.

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಕ್ಯಾಬಿನೆಟ್ ದರ್ಜೆಗೆ ಭಡ್ತಿ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

 

 

Share This Article
Leave a Comment

Leave a Reply

Your email address will not be published. Required fields are marked *