ಮಂಡ್ಯದಲ್ಲಿ 150 ಹಂದಿಗಳ ಸಜೀವ ದಹನ ಮಾಡಿದ ದುಷ್ಕರ್ಮಿಗಳು!

Public TV
1 Min Read

ಮಂಡ್ಯ: ಹಂದಿ ಸಾಕಾಣಿಕೆ ಗೂಡಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ 150 ಹಂದಿಗಳು ಸಜೀವ ದಹನವಾಗಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಹೊರವಲಯದಲ್ಲಿ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಪಾಂಡವಪುರದ ಮಹಾತ್ಮಗಾಂಧಿ ನಗರ ಬಡಾವಣೆಯ ಶಿವರಾಜು ಎಂಬವರಿಗೆ ಸೇರಿದ ಹಂದಿ ಗೂಡು ಇದಾಗಿದೆ. ಇದನ್ನೂ ಓದಿ: ಭೀಕರ ಅಪಘಾತ – ಬೈಕಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ಶಿವರಾಜು ಅವರು ಹೊರವಲಯದಲ್ಲಿ ಗೂಡು ನಿರ್ಮಿಸಿಕೊಂಡು ಹಂದಿ ಸಾಕಾಣಿಕೆ ಮಾಡುತ್ತಿದ್ದರು. ಯಾರು ಇಲ್ಲದಿದ್ದನ್ನ ಗಮನಿಸಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆಯಿಂದ ಶಿವರಾಜು ಅವರು ಸುಮಾರು 15 ಲಕ್ಷ ರೂ. ನಷ್ಟ ಅನುಭವಿಸಿದ್ದಾರೆ.

ದುಷ್ಕರ್ಮಿಗಳ ವಿರುದ್ಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *