ಮತಗಟ್ಟೆ ಬಾಗಿಲಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು!

Public TV
1 Min Read

ಕೋಲಾರ: ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಮತಗಟ್ಟೆಯ ಬಾಗಿಲಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಕೋಲಾರದಲ್ಲಿ ನಡೆದಿದೆ.

ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲೊಚರುವಪಲ್ಲಿ ಗ್ರಾಮದ ಮತಗಟ್ಟೆ ಸಂಖ್ಯೆ 94 ರಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗಿನ ಜಾವ ದುಷ್ಕರ್ಮಿಗಳು ಬಾಗಿಲಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಲೋಕಸಭೆಯ ಮೊದಲ ಹಂತದ ಮತದಾನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು ಒಟ್ಟು 14 ಕ್ಷೇತ್ರಗಳಲ್ಲಿ ಗುರುವಾರ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಉಡುಪಿ- ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಕೆ. ಎಚ್ ಮುನಿಯಪ್ಪ ಸ್ಪರ್ಧಿಸಿದ್ರೆ, ಬಿಜೆಪಿಯಿಂದ ಎಸ್. ಮುನಿಸ್ವಾಮಿ ಚುನಾವಣಾ ಕಣದಲ್ಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *