ಹಳೆಯ ದ್ವೇಷಕ್ಕೆ ತೊಗರಿ ಬೆಳೆಗೆ ಬೆಂಕಿ- ಠಾಣೆ ಮೆಟ್ಟಿಲೇರಿದ್ರೂ ರೈತನಿಗೆ ಸಿಗಲಿಲ್ಲ ನ್ಯಾಯ

Public TV
1 Min Read

ಬೀದರ್: ತಾಲೂಕಿನ ನೌಬಾದ್‍ನಲ್ಲಿ ದುಷ್ಕರ್ಮಿಗಳು ಹಳೆಯ ದ್ವೇಷಕ್ಕೆ ಬೆಳೆಗೆ ಬೆಂಕಿಹಚ್ಚಿ ಅಟ್ಟಹಾಸ ಮೆರೆದ್ದಾರೆ. ಲಕ್ಷ ಲಕ್ಷ ಬೆಲೆ ಬಾಳುವ ತೊಗರಿ ಹಾಗೂ ಕಾರಳು ಕಟಾವು ಮಾಡಿಟ್ಟಿದ್ದ ರಾಶಿಗೆ ಕೀಡಿಗೇಡಿಗಳು ಬೆಂಕಿ ಹಂಚಿದ್ದಾರೆ.

ಈ ಕೃತ್ಯಕ್ಕೆ ಸಂಬಂಧಿಕರಲ್ಲಿ ಇದ್ದ ಹಳೆಯ ದ್ವೇಷವೇ ಕಾರಣ ಎಂದು ರೈತ ಬಂಡೆಪ್ಪಾ ಆರೋಪಿಸಿದ್ದಾರೆ. ಈಗ ಬಂಡೆಪ್ಪಾ ಬೆಳೆ ಕಳೆದುಕೊಂಡು ಇಗಾ ಪೊಲೀಸ್ ಠಾಣೆ ಸುತ್ತಿ ಸುತ್ತಿ ಬೇಸತ್ತಿದ್ದಾರೆ.

ಜಿಲ್ಲಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳಿಗೆ ಈ ಕುರಿತು ಮನವಿ ನೀಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೇ ಕೊಲೆ ಮಾಡಲು ಕೀಡಿಗೇಡಿಗಳು ಸಂಚು ರೂಪಿಸಿ ಯತ್ನ ಮಾಡಿ ವಿಫಲರಾಗಿದ್ದಾರೆ. ಹೀಗಾಗಿ ನನಗೆ ನ್ಯಾಯ ಕೊಡಿಸಿ ಎಂದು ರೈತ ಬಂಡೆಪ್ಪಾ ಅಂಗಲಾಚುತ್ತಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *