ನಾಪತ್ತೆಯಾಗಿದ್ದ ಹಾಸನ ಕಾಂಗ್ರೆಸ್ ಮುಖಂಡ ಶವವಾಗಿ ಪತ್ತೆ!

Public TV
1 Min Read

ಹಾಸನ: ನಾಪತ್ತೆಯಾಗಿದ್ದ ಜಿಲ್ಲೆಯ ಕಾಂಗ್ರೆಸ್ ಹಿರಿಯ ಮುಖಂಡರೊಬ್ಬರ ಶವ ಬೇಲೂರು ತಾಲೂಕಿನ ಲಕ್ಕುಂದ ಕಾಫಿ ಎಸ್ಟೇಟ್ ನಲ್ಲಿ ಪತ್ತೆಯಾಗಿದೆ.

ಕಾಂಗ್ರೆಸ್ ಹಿರಿಯ ನಾಯಕ ಸಲ್ಡಾನ (75) ಶವ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಭಾನುವಾರ ಬೆಳಗ್ಗೆ ಕಾಫಿ ತೋಟಕ್ಕೆ ಹೋಗಿದ್ದ ಅವರು, ಮಧ್ಯಾಹ್ನದ ನಂತರ ದಿಢೀರನೆ ನಾಪತ್ತೆಯಾಗಿದ್ದರು. ಸೋಮವಾರ ಬೆಳಗ್ಗೆ ಕಾಫಿ ತೋಟದಲ್ಲಿರುವ ಕೃಷಿ ಹೊಂಡದ ಬಳಿ ಅವರ ಟೋಪಿ ಹಾಗೂ ಚಪ್ಪಲಿ ಸಿಕ್ಕಿದ್ದು, ಇದರಿಂದ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಕೃಷಿ ಹೊಂಡದಲ್ಲಿ ಅವರ ಮೃತದೇಹ ಸಿಕ್ಕಿದೆ.

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಆದರೆ ಸ್ಥಳೀಯರು ಸಲ್ಡಾನರವರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಅವರನ್ನು ಯಾರಾದರೂ ಕೊಲೆ ಮಾಡಿ ಕೃಷಿ ಹೊಂಡಕ್ಕೆ ಹಾಕಿರಬಹುದೆಂದು ಮಾತನಾಡುತ್ತಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *