ರಾಹುಲ್ ಸಂಚರಿಸೋ ಮಾರ್ಗದಲ್ಲಿ ಕೃತಕ ಹಸಿರೀಕರಣ- ರಸ್ತೆ ಮಧ್ಯೆ ಬೆಳೆದ ಪಾಮ್ ಗಿಡ ನೆಡೆಸಲು ಮುಂದಾದ ಅಜಯ್ ಸಿಂಗ್

Public TV
0 Min Read

ಕಲಬುರಗಿ: ಫೆಬ್ರವರಿ 12 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಲಬುರಗಿಯ ಜೇವರ್ಗಿ ಪಟ್ಟಣಕ್ಕೆ ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಅವರು ಆಗಮಿಸುವ ರಸ್ತೆ ಮಾರ್ಗದಲ್ಲಿ ಅಲಂಕಾರಿಕ ಗಿಡಗಳನ್ನು ನೆಡಲಾಗುತ್ತಿದೆ.

ಈ ಮೂಲಕ ಕೃತಕ ಹಸಿರೀಕರಣ ಮಾಡಲು ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಮುಂದಾಗಿದ್ದಾರೆ. ರಾಹುಲ್ ಗಾಂಧಿ ಸಂಚರಿಸುವ ಮಾರ್ಗ ಮಧ್ಯದ ಉದ್ದಕ್ಕೂ ಸುಮಾರು 14 ಸಾವಿರ ರೂಪಾಯಿ ಬೆಲೆಯ, ಬೆಳೆದು ನಿಂತ ಪಾಮ್ ಗಿಡಗಳನ್ನು ನೆಡಲಾಗುತ್ತಿದೆ.

ಯಾವ ಯೋಜನೆ ಅಥವಾ ಯಾರ ಅನುದಾನದಲ್ಲಿ ಈ ದುಂದುವೆಚ್ಚ ಮಾಡಲಾಗುತ್ತಿದೆ ಎಂಬುದು ಇದೀಗ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *