ಆಸ್ಪತ್ರೆಯಿಂದ ಡಿಸ್ಚಾರ್ಜ್ ನಂತ್ರ ವಿರೂಪಾಕ್ಷೇಶ್ವರನ ದರ್ಶನ ಪಡೆದ್ರು ಆನಂದ್ ಸಿಂಗ್..!

Public TV
1 Min Read

ಬಳ್ಳಾರಿ: ರಾಮನಗರದ ಈಗಲ್ ಟನ್ ರೆಸಾರ್ಟ್‍ನಲ್ಲಿ ಕಂಪ್ಲಿ ಶಾಸಕ ಜೆಎನ್ ಗಣೇಶ್ ಹಲ್ಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ಇಂದು ಕುಟುಂಬ ಸಮೇತವಾಗಿ ಹಂಪಿ ವಿರೂಪಾಕ್ಷೇಶ್ವರನ ದರ್ಶನ ಪಡೆದಿದ್ದಾರೆ.

ಹಲ್ಲೆ ನಂತರ 15 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಆನಂದ್ ಸಿಂಗ್ ಅವರನ್ನು ಭೇಟಿಯಾಗಲು ಕ್ಷೇತ್ರದ ಜನರು ನಿರಂತರವಾಗಿ ಬೆಂಗಳೂರಿಗೆ ಭೇಟಿ ಮಾಡಲು ಆಗಮಿಸುತ್ತಿದ್ದರು. ಹಾಗಾಗಿ ಸ್ವತಃ ಆನಂದ್ ಸಿಂಗ್ ಅವರೇ ಇಂದು ಕ್ಷೇತ್ರಕ್ಕೆ ತೆರಳಿ ಜನರನ್ನು ಭೇಟಿ ಮಾಡಿದ್ದಾರೆ. ಇದನ್ನೂ ಓದಿ: ಸದನಕ್ಕೆ ಹಾಜರಾದ ಬಳಿಕ ಆನಂದ್ ಸಿಂಗ್ ಆರೋಗ್ಯದಲ್ಲಿ ಮತ್ತೆ ಏರುಪೇರು, ಆಸ್ಪತ್ರೆಗೆ ದಾಖಲು

ಇಂದು ಬೆಳ್ಳಂಬೆಳ್ಳಗ್ಗೆ ಆನಂದ್ ಸಿಂಗ್ ಅವರು ಪತ್ನಿ ಲಕ್ಷಿ ಸಿಂಗ್ ಹಾಗೂ ಕುಟುಂಬ ಸಮೇತವಾಗಿ ವಿರೂಪಾಕ್ಷೇಶ್ವರ ಹಾಗೂ ಭುವನೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ. ನಂತರ ಕ್ಷೇತ್ರದ ಜನರನ್ನು ಭೇಟಿ ಮಾಡಿದ್ದಾರೆ. ಇದನ್ನೂ ಓದಿ: ಸದನಕ್ಕೆ ಹಾಜರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಆನಂದ್ ಸಿಂಗ್ ಡಿಸ್ಚಾರ್ಜ್

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *