ಮತಾಂತರದ ಪಿಡುಗಿನ ಮಧ್ಯೆ ಯುವತಿ ಸಾಧನೆಯನ್ನು ಕೊಂಡಾಡಿದ ಗೂಳಿಹಟ್ಟಿ

Public TV
1 Min Read

– UPSC ಪರೀಕ್ಷೆಯಲ್ಲಿ ಮಮತಾಗೆ 707ನೇ ರ‍್ಯಾಂಕ್

ಚಿತ್ರದುರ್ಗ: ಕೇಂದ್ರ ಲೋಕಸೇವಾ ಆಯೋಗ (UPSC) ಪರೀಕ್ಷೆಯಲ್ಲಿ 707ನೇ ರ‍್ಯಾಂಕ್ ಪಡೆದಿರುವ ಮಮತಾ ಅವರಿಗೆ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈ ಕುರಿತು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡು ಸಂತಸದ ಜೊತೆಗೆ ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದಾರೆ. ನಮ್ಮ ಕ್ಷೇತ್ರಕ್ಕೆ ಅಂಟಿಕೊಂಡಿರುವ ಮತಾಂತರ ಪಿಡುಗಿನ ನಡುವೇ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ದೇವಪುರ ಭೋವಿಹಟ್ಟಿ ಗ್ರಾಮದ ಮಮತಾ ಜಿ. ಅವರು ಯುಪಿಎಸ್ ಸಿ ಪರೀಕ್ಷೆಯಲ್ಲಿ 707ನೇ ರ‍್ಯಾಂಕ್ ಪಡೆದಿರೋದು ಶ್ಲಾಘನೀಯ ಎಂದಿದ್ದಾರೆ.

ದೇವಪುರ ಭೋವಿಹಟ್ಟಿ ಗ್ರಾಮದ ಯುವತಿ ಜಿ.ಮಮತಾ ಖಾಸಗಿ ಶಾಲಾ ಶಿಕ್ಷಕರಾದಗೋವಿಂದಪ್ಪನವರ ಪುತ್ರಿ. ಇವರು ಅನೇಕ ಸಮಸ್ಯೆಗಳನ್ನು ಎದುರಿಸಿದ್ದಾರೆ. ಇಂತಹ ವೇಳೆ ಯಾವುದಕ್ಕೂ ಎದೆಗುಂದದೆ ಯುಪಿಎಸ್‍ಸಿ ಪರೀಕ್ಷೆಯಲ್ಲಿ ನನ್ನ ಕ್ಷೇತ್ರದ ಯುವತಿ ಸಾಧನೆ ನಮಗೆ ಅತೀವ ಸಂತೋಷ ತಂದಿದೆ. ಈ ಗ್ರಾಮದಲ್ಲಿ ಸುಮಾರು 20ಕ್ಕೂ ಅಧಿಕ ಕುಟುಂಬಗಳು ಮತಾಂತರ ಆಗಿವೆ. ಆದರೂ ಇದ್ಯಾವುದನ್ನು ಮನಸ್ಸಿಗೆ ತೆಗೆದುಕೊಳ್ಳದೇ ಶ್ರಮವಹಿಸಿ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಉತ್ತಮ ಸ್ಥಾನ ಗಳಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯುಪಿಎಸ್‍ಸಿ ಅಂತಿಮ ಫಲಿತಾಂಶ ಪ್ರಕಟ- ರಾಜ್ಯದ 18 ಮಂದಿ ಉತ್ತೀರ್ಣ

ಈ ಹಿಂದೆ ಅಧಿವೇಶನದಲ್ಲಿ ಮತಾಂತರದ ಬಗ್ಗೆ ಸ್ವತಃ ಶಾಸಕರೇ ಪ್ರಸ್ತಾಪ ಮಾಡಿದ್ದು, ಇದೊಂದೇ ಗ್ರಾಮದಲ್ಲಿ ಬಹುಸಂಖ್ಯೆಯ ಜನರು ಮತಾಂತರ ಆಗಿದ್ದಾರೆ. ಆದರೆ ಇಂತಹ ಗೊಂದಲದ ಮಧ್ಯೆ ತನ್ನ ಸಾಧನೆಯನ್ನು ಸಾಧಿಸಿರುವ ಮಮತಾ ಅವರಿಗೆ ಅಭಿನಂದನೆಗಳ ಪೂರ ಹರಿದುಬರುತ್ತಿವೆ ಎಂದರು. ಇದನ್ನೂ ಓದಿ: ನನ್ನ ಹೆತ್ತ ತಾಯಿಯನ್ನ ಮತಾಂತರ ಮಾಡಿದ್ದಾರೆ: ಗೂಳಿಹಟ್ಟಿ ಶೇಖರ್

ಸದ್ಯ ಮಮತಾ ಸಾಧನೆಯ ಬಗ್ಗೆ ಸಾಮಾಜಿಕ ಜಾಲಾತಾಣಗಳಲ್ಲಿ ಶಾಕರು ಸೇರಿದಂತೆ ಕೋಟೆನಾಡಿನ ಜನರು ವಾಟ್ಸಪ್ ಹಾಗೂ ಸೋಶಿಯಲ್ ಮೀಡಿಯಾ ಮುಖಪುಟದಲ್ಲಿ ಭಾವಚಿತ್ರ ಸಹಿತ ಬರೆದುಕೊಂಡು ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *