ಅಮ್ಮನ ಕ್ಷೇತ್ರದಲ್ಲಿ ಪುತ್ರನ ದರ್ಬಾರ್ – ಲಕ್ಷ್ಮೀ ಹೆಬ್ಬಾಳ್ಕರ್ ಗೈರಲ್ಲಿ ಗುದ್ದಲಿ ಪೂಜೆ ನೆರವೇರಿಸಿದ ಮನ್ರಾಲ್

Public TV
1 Min Read

ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಡಬೇಕಿದ್ದ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆಯನ್ನು ಅವರ ಗೈರು ಹಾಜರಿಯಲ್ಲಿ ಪುತ್ರ ನೆರವೇರಿಸಿದ್ದು, ಈ ಮೂಲಕ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ.

ಇಂದು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುತಗಾ ಗ್ರಾಮದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಕಾರ್ಯ ಏರ್ಪಡಿಸಲಾಗಿತ್ತು. ಆದರೆ ಈ ವೇಳೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೈರು ಹಾಜರಿ ಆಗಿದ್ದರು. ಪರಿಣಾಮ ಜನಪ್ರತಿನಿಧಿಗಳು ಮಾಡಬೇಕಿದ್ದ ಕಾರ್ಯವನ್ನು ಶಾಸಕಿ ಪುತ್ರ  ಮನ್ರಾಲ್ ಮಾಡಿದ್ದು, ಕ್ಷೇತ್ರದಲ್ಲಿ ತಮ್ಮ ದರ್ಬಾರ್ ನಡೆಸಿದ್ದಾರೆ.

ಶಿಷ್ಟಾಚಾರ ಪ್ರಕಾರ ಕ್ಷೇತ್ರದ ಶಾಸಕರು ಗೈರು ಹಾಜರಿ ಇರುವ ವೇಳೆ ಆ ಕ್ಷೇತ್ರದ ಇತರೇ ಜನ ಪ್ರತಿನಿಧಿಗಳಾದ ಗ್ರಾಮ ಪಂಚಾಯತ್ ಅಧ್ಯಕ್ಷ ಅಥವಾ ತಾಲೂಕು ಪಂಚಾಯತ್ ಅಧ್ಯಕ್ಷರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಾರೆ. ಇಲ್ಲವಾದರೆ ಇಲಾಖೆಗೆ ಸಂಬಂಧಿಸಿದ ಉನ್ನತ ಅಧಿಕಾರಿಗಳು ಈ ಕಾರ್ಯವನ್ನು ನಡೆಸುತ್ತಾರೆ. ಆದರೆ ಇಲ್ಲಿ ಮಾತ್ರ ಶಾಸಕರ ಪುತ್ರ ಚಾಲನೆ ನೀಡಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಈ ಕುರಿತು ಸ್ಥಳೀಯ ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದು, ಅವರ ವಿರೋಧದ ನಡುವೆಯೇ ಕಾರ್ಯಕ್ರಮ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Share This Article
Leave a Comment

Leave a Reply

Your email address will not be published. Required fields are marked *